Download Our App

Follow us

Home » ರಾಜ್ಯ » ಹಿರಿಯ ಪೊಲೀಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜೀನಾಮೆ..!

ಹಿರಿಯ ಪೊಲೀಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜೀನಾಮೆ..!

ಬೆಂಗಳೂರು : ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಐದು ತಿಂಗಳ ನಿವೃತ್ತಿ ಮುಂಚೆಯೇ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿ. ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾಗಿದ್ದಾರೆ.

ಕಮಲ್ ಪಂತ್ ಅವರ ಬಳಿಕ ಪ್ರತಾಪ್ ರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು. ಬಳಿಕ ಅವರನ್ನು ವರ್ಗಾವಣೆ ಮಾಡಿ ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿತ್ತು.

ಪ್ರತಾಪ್ ರೆಡ್ಡಿಯವರು ಇದೇ ವರ್ಷ ಜುಲೈ ತಿಂಗಳಲ್ಲಿ ನಿವೃತ್ತಿಯಾಗಬೇಕಿದ್ದು, ಇದೀಗ ಪ್ರತಾಪ್ ರೆಡ್ಡಿಯವರ ನಡೆ ಹಲವು ಅನುಮಾನ ಮೂಡಿಸಿದೆ. ಕಳೆದ ಮೂರು ದಿನಗಳ ಹಿಂದೆ ಪ್ರತಾಪ್ ರೆಡ್ಡಿ ಡಿಜಿ ಕಛೇರಿಯಲ್ಲಿ ಮಿಟಿಂಗ್ ಅಡೆಂಟ್ ಮಾಡಿದ್ರು. ಸಭೆಯಲ್ಲಿ ಡಿಜಿಪಿ ಪ್ರತಾಪ್ ರೆಡ್ಡಿಯವರಿಗೆ ಅವಮಾನ ಮಾಡಲಾಯ್ತಾ…? ಅವಮಾನದಿಂದ ಬೇಸತ್ತು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ರಾ..? ಎಂದು ಐಪಿಎಸ್ ವಲಯದಲ್ಲಿ ಹಲವು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ ಮಹಿಳೆ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here