Download Our App

Follow us

Home » ಸಿನಿಮಾ » “ಕೊರಗಜ್ಜ” ಸಿನಿಮಾ ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…!

“ಕೊರಗಜ್ಜ” ಸಿನಿಮಾ ರೀ ಶೂಟ್ ವೇಳೆ ಅಗೋಚರ ಶಕ್ತಿಯ ಅಪಾಯದಿಂದ ಪಾರಾದ ನಿರ್ದೇಶಕ ಅತ್ತಾವರ್…!

ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹುಕೋಟಿ ಬಜೆಟ್​​ನ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್​​ನಡಿಯ “ಕೊರಗಜ್ಜ” ಸಿನಿಮಾ ಆರಂಭದಿಂದಲೂ ಹಲವಾರು ಪವಾಡ ಮತ್ತು ಸವಾಲುಗಳ ಜೊತೆ ತೊಂದರೆಗಳನ್ನು ಎದುರಿಸುತ್ತಾ ಬಂದಿರುವ ವಿಚಾರ ಗೊತ್ತೇ ಇದೆ. ಕೊಚ್ಚಿ ಮತ್ತು ಮುಂಬೈನಲ್ಲಿ ಕೊನೆಹಂತದ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ.

ದೈವ ನರ್ತನದ ಪ್ರಮುಖ ದೃಶ್ಯವೊಂದನ್ನು ನಿನ್ನೆ ಮಧ್ಯರಾತ್ರಿಯ ವೇಳೆ ನೂರಾರು ಉರಿವ ಪಂಜುಗಳನ್ನು ಧರಿಸಿಕೊಂಡ, ಕೇರಳದ ತೆಯ್ಯಂ ಕಲಾವಿದರ ಮತ್ತು ಮಾಸ್ ಮಾದರವರ ಮೈ ನವಿರೇಳಿಸುವ ಸಾಹಸ ಸನ್ನಿವೇಶವೊಂದನ್ನು ನಿರ್ದೇಶಕ ಸುಧೀರ್ ಅತ್ತಾವರ್ ಮೂರನೇ ಬಾರಿ ಮರು ಚಿತ್ರೀಕರಿಸುತ್ತಿದ್ದರು. ಖ್ಯಾತ ಕಲಾವಿದೆ ಶ್ರುತಿಯೊಂದಿಗೆ ನೂರಾರು ಸಹ ಕಲಾವಿದರು ಭಾಗವಹಿಸಿದ್ದ ಸನ್ನಿವೇಶವನ್ನು ಬೆಂಗಳೂರಿನ ಹೊರವಲಯದ ಕನಕಪುರ ರಸ್ತೆಯ ಕಗ್ಗಲಿ ಹಳ್ಳಿಯಲ್ಲಿ ಹಾಕಿದ್ದ ಅದ್ದೂರಿ ಸೆಟ್​​ನಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ಡಿ ಒ ಪಿ ಮನೋಜ್ ಪಿಳ್ಳೈ ಚಿತ್ರೀಕರಿಸುತ್ತಿದ್ದಾಗ, ನಿರ್ದೇಶಕ ಸುಧೀರ್ ಅತ್ತಾವರ್ ರನ್ನು ಅಗೋಚರ ಶಕ್ತಿಯೊಂದು ಬಲವಾಗಿ ತಳ್ಳಿ ಏಳೆಂಟು ಗಜ ದೂರಕ್ಕೆಸೆಯಲ್ಪಟ್ಟ ಘಟನೆ ಚಿತ್ರ ತಂಡವನ್ನು ಬೆಚ್ಚಿಬೀಳಿಸಿದೆ.

ಎಲ್ಲೂ ಎಡವಿ ಬೀಳದೆ, ಜಾರದೆ ಇದ್ದರೂ, ಏಕಾಏಕಿ ಬಲವಾಗಿ ತಳ್ಳಿದಂತೆ ವೇಗ ಪಡೆದುಕೊಂಡು ನಿರ್ದೇಶಕರು ಎಸೆಯಲ್ಪಟ್ಟ ವಿಲಕ್ಷಣ ಘಟನೆ ನಡೆದಿದೆ. ಸುಮಾರು ಮುನ್ನೂರಕ್ಕಿಂತಲೂ ಹೆಚ್ಚಿದ್ದ ಚಿತ್ರತಂಡದ ಸಮಕ್ಷಮದಲ್ಲೇ ಈ ಘಟನೆ ನಡೆದಿದ್ದು, ಸನ್ನಿವೇಷವನ್ನು ವಿವರಿಸುತ್ತಿದ್ದ ಸಮಯದಲ್ಲಿ ನಿರ್ದೇಶಕರನ್ನು ಒಂದೇ ಸಮನೆ ಅಗೋಚರ ಶಕ್ತಿ ಬಲವಾಗಿ ದೂಡಿದಂತಾಗಿದೆ. ತನ್ನನ್ನು ನಿಭಾಯಿಸಿಕೊಳ್ಳದೆ ನಿರ್ದೇಶಕರು ಸುಮಾರು ದೂರಕ್ಕೆ ಎಸೆಯಲ್ಪಟ್ಟದ್ದನ್ನು ಕಂಡು ಖ್ಯಾತ ನಟಿ ಶ್ರುತಿ, ನಿರ್ದೇಶಕರು ದೊಡ್ಡ ಮಟ್ಟದ ಗಾಯಗಳಿಂದ ಪಾರಾಗಿರುವುದನ್ನು ಕೊರಗಜ್ಜ ದೈವವೇ ನಿರ್ದೇಶಕರನ್ನು ಕಾಪಾಡಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ : ಡಿ.ಕೆ ಶಿವಕುಮಾರ್..!

Leave a Comment

DG Ad

RELATED LATEST NEWS

Top Headlines

ವಾಲ್ಮೀಕಿ ಹಗರಣ – ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ 10 ಕೆ.ಜಿ‌ ಚಿನ್ನದ ಬಿಸ್ಕೆಟ್ SIT ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ತನಿಖೆಯನ್ನ SIT ಚುರುಕುಗೊಳಿಸಿದೆ. ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ ಬರೋಬ್ಬರಿ 10 ಕೆ.ಜಿ‌ ಚಿನ್ನದ

Live Cricket

Add Your Heading Text Here