ರಾಜ್ಯದಲ್ಲಿ ಪೆನ್ಡ್ರೈವ್ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಆಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಇದೀಗ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಸಿಲುಕಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಮಹತ್ವದ ಹೇಳಿಕೆಗಳನ್ನು ನೀಡಿ ಭಾರೀ ಸದ್ದು ಮಾಡಿದ್ದ ದೇವರಾಜೇಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೀಗ ಎಸ್ಐಟಿ ಕೋರ್ಟ್ನಲ್ಲಿ ವಾದ ಮಾಡಿ ವಿಚಾರಣೆಗಾಗಿ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಇದರಿಂದ ಕೆಂಡಾಮಂಡಲರಾಗಿರುವ ಅವರು, ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ. ನಾನು ಆಚೆ ಬಂದ್ರೆ ಸರ್ಕಾರವೇ ಪತನವಾಗುತ್ತೆ. ಅಲ್ಲದೇ ಪೆನ್ಡ್ರೈವ್ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟು ಡಿಕೆ ಶಿವಕುಮಾರ್ ವಿರುದ್ಧ 100 ಕೋಟಿ ರೂ ಆಫರ್ ಬಾಂಬ್ ಸಿಡಿಸಿದ್ದಾರೆ.
ನಿನ್ನೆ (ಮೇ 17) ಹಾಸನ ಕೋರ್ಟ್ ದೇವರಾಜೇಗೌಡ ಅವರನ್ನು ಎಸ್ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದು, ಈ ವೇಳೆ ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ವಕೀಲ ದೇವರಾಜೇಗೌಡ, “ಲೈಂಗಿಕ ಕಿರುಕುಳ ಕೇಸ್ ಹಾಕ್ಸಿದ್ರು ಅದರಲ್ಲಿ ಎವಿಡೆನ್ಸ್ ಸಿಗಲಿಲ್ಲ. ಅದಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಅದರಲ್ಲೂ ಸಾಕ್ಷ್ಯ ಸಿಗಲಿಲ್ಲ. ಏನಾದರೂ ಮಾಡಿ ದೇವರಾಜೇಗೌಡರನ್ನ ಮಟ್ಟ ಹಾಕಬೇಕು ಎಂದು ಹೇಳಿ ಈಗ ಪೆನ್ಡ್ರೈವ್ ಕೇಸ್ನಲ್ಲಿ ಲಾಕ್ ಮಾಡಿಸಿದ್ದಾರೆ. ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ.
ಇನ್ನು, ಕಾರ್ತಿಕ್ ನನ್ನು ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ದರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರೀಯಾಂಕ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ಪೆನ್ಡ್ರೈವ್ ಅನ್ನು ಕುಮಾರಸ್ವಾಮಿ ಹಂಚಿದ್ರು ಎಂದು ಹೇಳು ನಿನಗೆ ಸಮಸ್ಯೆ ಆಗಲ್ಲ ಸೆಕ್ಯೂರ್ ಮಾಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ದೊಡ್ಡಮಟ್ಟದ 100 ಕೋಟಿ ಹಣದ ಆಫರ್ ಕೊಟ್ಟರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್ನ 110 ರೂಂಗೆ ಕಳುಹಿಸಿದ್ದರು. ಚನ್ನರಾಯಪಟ್ಟಣ ಮಾಜಿ ವಿದಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರನ್ನು ಐದು ಕೋಟಿ ಕ್ಯಾಶ್ ಕೊಟ್ಟು ಸಂಧಾನಕ್ಕೆ ಕಳುಹಿಸಿದ್ದರು. ಆದ್ರೆ, ಇದಕ್ಕೆ ನಾನು ಒಪ್ಪದೇ ಇದ್ದಾಗ ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಸಂಚು ಮಾಡಿದ್ರು ಎಂದು ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಕೇಸ್ : ಸೋಮವಾರಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ..!