ಗದಗ : ಡೆತ್ ನೋಟ್ ಬರೆದಿಟ್ಟು ಡಾಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡರೂ ಆಗಿರುವ ಡಾಕ್ಟರ್ ಶಶಿಧರ್ ಹಟ್ಟಿ ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರ್ಜಾಪೂರದ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಡಾಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ಶರಣಗೌಡ ಮರಳು ದಂಧೆ ನಡೆಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಮರಳು ವ್ಯವಹಾರದಲ್ಲಿ ಶಶಿಧರ್ ಹಟ್ಟಿಯೂ ಪಾಲುದಾರರಾಗಿದ್ದರು, ಎಲ್ಲಾ ಲೆಕ್ಕಕೊಟ್ರು ಪದೇ ಪದೇ ಶರಣಗೌಡ ಕಿರುಕುಳ ಕೊಡ್ತಿದ್ದರು ಎಂದು ಆರೋಪಿಸಿದ್ದಾರೆ.
ಹೀಗಾಗಿ ಮನನೊಂದು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಸಿದ್ದಾರೆ. ಶರಣಗೌಡ, ಶಶಿಧರ್ ಹಟ್ಟಿ ಸೇರಿ ನಾಲ್ವರು ಮರಳು ವ್ಯವಹಾರ ಮಾಡ್ತಿದ್ರು, ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ಗೆ ಹೇಳಿ ಶಿಕ್ಷೆ ಕೊಡಿಸಿ ಎಂದು ಡೆತ್ನೋಟ್ ಬರೆದಿಟ್ಟು ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಇಂದು 200ಕ್ಕೂ ಹೆಚ್ಚು ರೈತ ಸಂಘಟನೆಗಳಿಂದ ದೆಹಲಿ ಚಲೋ : ದೆಹಲಿ ಗಡಿ ಬಂದ್..!