Download Our App

Follow us

Home » ರಾಜಕೀಯ » ದೆಹಲಿಗೆ ತೆರಳಿದ ಬಿಜೆಪಿ ನಾಯಕ : ಲೋಕಸಭೆ ಟಿಕೆಟ್‌ಗೆ ಡಾ. ಕೆ ಸುಧಾಕರ್‌ ಕಸರತ್ತು..!

ದೆಹಲಿಗೆ ತೆರಳಿದ ಬಿಜೆಪಿ ನಾಯಕ : ಲೋಕಸಭೆ ಟಿಕೆಟ್‌ಗೆ ಡಾ. ಕೆ ಸುಧಾಕರ್‌ ಕಸರತ್ತು..!

ದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಮಾಜಿ ಸಚಿವರಾದ ಈಶ್ವರಪ್ಪ ಮತ್ತು ಸೋಮಣ್ಣ ಬಳಿಕ ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್‌ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಹಿನ್ನೆಲೆ ಮೊನ್ನೆಯಷ್ಟೇ ಮಾಜಿ ಸಿಎಂ ಕುಮಾರಸ್ವಾಮಿಯನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದೀಗ ಸುಧಾಕರ್‌ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್‌ ಕಸರತ್ತು ನಡೆಸುತ್ತಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್‌ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇವರ ವಿರುದ್ಧ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್‌ನ ಪ್ರದೀಪ್‌ ಈಶ್ವರ್‌ ಗೆಲುವು ಸಾಧಿಸಿದ್ದರು.

ಈಗ ಲೋಕಸಭೆ ಚುನಾವಣೆಗೆ ಕಾಲ ಸಮೀಪಿಸುತ್ತಿದೆ. ಈ ಹೊತ್ತಲ್ಲಿ ರಾಜ್ಯ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಟಿಕೆಟ್‌ ಗಿಟ್ಟಿಸಲು ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ವೃದ್ಧರಿಗೆ ಹಣ ವರ್ಗಾವಣೆ ಮಾಡೋ ನೆಪದಲ್ಲಿ ವಂಚನೆ – ಖತರ್ನಾಕ್ ಆರೋಪಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here