ಹಾಸನ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಸನ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿರುವ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪರ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅಖಾಡಕ್ಕಿಳಿಯಲಿದ್ದಾರೆ.
ಇಂದು ದಳಪತಿ ಹಾಸನ ಲೋಕಸಭಾ ಕುರಿತು ಪೂರ್ವಭಾವಿ ಸಭೆ ನಡೆಸಲಿದ್ದು, ಹಾಸನದಲ್ಲಿ ದೇವೇಗೌಡ್ರ ಬಳಿಕ ಪ್ರಜ್ವಲ್ ರೇವಣ್ಣ ಪರ ಸಭೆ ನಡೆಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬರುವ 3-4 ಕ್ಷೇತ್ರದಲ್ಲೂ ಗೆಲ್ಲಲು ಪ್ರತಿದಿನ ಕಸರತ್ತು ನಡೆಸುತ್ತಿದ್ದಾರೆ.
ಇಂದು ಹಾಸನ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆ ಬೆಳಗ್ಗೆ 11 ಗಂಟೆಗೆ ಹಾಸನದಲ್ಲಿ ಜೆಡಿಎಸ್ ಮುಖಂಡರು ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಚುನಾವಣಾ ತಯಾರಿ, ಪ್ರಚಾರ ಕಾರ್ಯ, ಗೆಲುವಿನ ತಂತ್ರ ಕುರಿತು ಚರ್ಚೆ ನಡೆಸಲಿದ್ದಾರೆ. ಹಾಗೂ ಜಿಲ್ಲಾ ಮಟ್ಟದಲ್ಲಿ ಅಸಮಾಧಾನ ಇದ್ರೆ ಬಗೆಹರಿಸುವ ಪ್ರಯತ್ನಕ್ಕೂ ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.
ಇದನ್ನೂ ಓದಿ : ‘ಬನಾರಸ್’ ನಾಯಕ ಝೈದ್ ಖಾನ್ಗೆ ಆಕ್ಷನ್ ಕಟ್ ಹೇಳಲಿದ್ದಾರೆ ‘ಉಪಾಧ್ಯಕ್ಷ’ ನಿರ್ದೇಶಕ ಅನಿಲ್ ಕುಮಾರ್..!