ಮೈಸೂರು : ಮೈಸೂರಿನ ಮಾನಸ ಗಂಗೋತ್ರಿ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಡಿಪಿ ಹೊತ್ತಿ ಉರಿದಿದ್ದು, ವಿದ್ಯುತ್ ಪೆಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ವಿದ್ಯುತ್ ಪೆಟ್ಟಿಗೆಯಲ್ಲಿನ ಶಬ್ದ ಕೇಳುತ್ತಿದ್ದಂತೆ ವಿದ್ಯಾರ್ಥಿಗಳು ಓಡಿ ಬಂದಿದ್ದಾರೆ. ವಿದ್ಯಾರ್ಥಿಗಳು ಈ ಹಿಂದೆ ವಿದ್ಯುತ್ ರಿಪೇರಿ ಮಾಡಿಸುವಂತೆ ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ಇದನ್ನು ನಿರ್ಲಕ್ಷಿಸಿದ್ದರಿಂದ ಇದೀಗ ಡಿಪಿ ಸಿಡಿದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದಿದ್ದಾರೆ.
ಇದನ್ನೂ ಓದಿ : ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರಕ್ಕೆ ಅಚ್ಯುತ್ ಕುಮಾರ್ ಎಂಟ್ರಿ..!
Post Views: 85