ನವದೆಹಲಿ : ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಗುದ್ದಾಟ ಜೋರಾಗಿದೆ. ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಕುರ್ಚಿಗೆ ಟವಲ್ ಹಾಕಿದ್ದ ಸಚಿವ ಎಂ.ಬಿ ಪಾಟೀಲ್ ಅವರು ನಿನ್ನೆ ದಿಢೀರ್ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರಿ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇನ್ನು, ಹೆಚ್ಡಿಕೆ ರಾಜ್ಯ ಸರ್ಕಾರದ ಭವಿಷ್ಯದ ಬಗ್ಗೆ ಪದೇ ಪದೇ ಮಾತ್ನಾಡ್ತಿದ್ದು, ಈ ಹೊತ್ತಲ್ಲೇ HDK-M.B.ಪಾಟೀಲ್ ಭೇಟಿ ಬಗ್ಗೆ ಕಾಂಗ್ರೆಸ್ನಲ್ಲಿ ಭಾರಿ ಗುಸುಗುಸು ಕೇಳಿಬರುತ್ತಿದೆ. ಒಂದೆಡೆ ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಾಸಿಕ್ಯೂಷನ್ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದರೆ, ಇನ್ನೊಂದೆಡೆ ಅವಕಾಶ ಸಿಕ್ಕರೆ ನಾನೂ ಸಿಎಂ ಆಗಲು ರೆಡಿ ಎಂದು ಕಾಂಗ್ರೆಸ್ನ ಕೆಲ ನಾಯಕರು ಹೇಳುತ್ತಿದ್ದಾರೆ. ಇಂಥಾ ಹೊತ್ತಲ್ಲಿ ಕುಮಾರಸ್ವಾಮಿ-ಎಂ.ಬಿ.ಪಾಟೀಲ್ ಭೇಟಿ ಭಾರಿ ಅಚ್ಚರಿಗೆ ಕಾರಣವಾಗಿದೆ.
ಇದನ್ನೂ ಓದಿ : “ರಾಮರಸ” ಚಿತ್ರತಂಡದಿಂದ ಅದ್ದೂರಿ ಗಣೇಶೋತ್ಸವ – ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!