ಹಾಸನ : ಮಗುವಿನ ಅನಾರೋಗ್ಯದಿಂದ ಮನನೊಂದು ತಂದೆ ಆತ್ಮಹತ್ಯೆ ಯತ್ನಿಸಿರುವ ಘಟನೆ ಹಾಸನದ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಬಳಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಆಸ್ಪತ್ರೆಯ ಕಟ್ಟಡದ ಐದನೇ ಮಹಡಿ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆಯೊಡ್ಡಿದ್ದಾನೆ.
ಗಂಗಸ್ವಾಮಿಯ 2 ತಿಂಗಳ ಮಗುವಿಗೆ ಅನಾರೋಗ್ಯದ ಹಿನ್ನಲೆ ಚಿಕಿತ್ಸೆಗಾಗಿ ಹಿಮ್ಸ್ಗೆ ದಾಖಲು ಮಾಡಿದ್ದ. ಆದರೆ ಮಗುವಿನ ಅನಾರೋಗ್ಯ ಹೆಚ್ಚಾಗಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಆಸ್ಪತ್ರೆ ಸಿಬ್ಬಂದಿ ಗಂಗಸ್ವಾಮಿಯ ಮನವೊಲಿಸಿ ಕೆಳಗಿಳಿಸಿ, ಹಾಸನ ನಗರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸುರೇಶ್ ಬಾಬು ನೇಮಕ..!
Post Views: 120