ಹಾಸನ : ನಿನ್ನೆ ಸಂಜೆ ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರೋ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆಬಿ ಪಾಳ್ಯದಲ್ಲಿ ನಡೆದಿದೆ.
ಮತಗಟ್ಟೆ ಬಳಿಯೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ. ಮತಗಟ್ಟೆ ಸಂಖ್ಯೆ 249ರಲ್ಲಿ ಈ ಘಟನೆ ನಡೆದಿದ್ದು, ಜೈಕಾರ ಕೂಗಿದ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಮೋಹನ್ಕುಮಾರ್, ಗಿರೀಶ್ ಹಾಗೂ ಮಂಜುನಾಥ್ ಎಂಬುವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಶೇ 69.23ರಷ್ಟು ಮತದಾನ – ಅತೀ ಹೆಚ್ಚು, ಅತೀ ಕಡಿಮೆ ಮತದಾನವಾಗಿದ್ದೆಲ್ಲಿ? ಇಲ್ಲಿದೆ ವಿವರ..!
Post Views: 367