Download Our App

Follow us

Home » ರಾಜಕೀಯ » ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್​ ಅಭ್ಯರ್ಥಿ ಫೈನಲ್ – ಕೆ.ವಿ ಗೌತಮ್ ​ಹೆಸರು ಘೊಷಿಸಿದ ಹೈಕಮಾಂಡ್‌..!

ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್​ ಅಭ್ಯರ್ಥಿ ಫೈನಲ್ – ಕೆ.ವಿ ಗೌತಮ್ ​ಹೆಸರು ಘೊಷಿಸಿದ ಹೈಕಮಾಂಡ್‌..!

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್‌ ಕೋಲಾರಕ್ಕೆ ಟಿಕೆಟ್‌ ಘೋಷಣೆ ಮಾಡಿದೆ. ರಮೇಶ್‌ ಕುಮಾರ್‌ ಹಾಗೂ ಸಚಿವ ಕೆಎಚ್‌ ಮುನಿಯಪ್ಪ ಅವರ ಬಣ ಬಡಿದಾಟದ ನಡುವೆ ಕೋಲಾರ ಲೋಕಸಭಾ ಕ್ಷೇತ್ರದಿಂದ ಕೆವಿ ಗೌತಮ್‌ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧಾರ ಮಾಡಿದೆ.

ಕೋಲಾರದಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ರಮೇಶ್‌ ಕುಮಾರ್‌ ಹಾಗೂ ಸಚಿವ ಕೆಎಚ್‌ ಮುನಿಯಪ್ಪ ಅವರ ಬಣದ ನಡುವೆ ಭಾರೀ ತಿಕ್ಕಾಟ ನಡೆದಿತ್ತು.

 

ಇನ್ನೇನು ಕೆಎಚ್‌ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣಗೆ ಕೋಲಾರ ಟಿಕೆಟ್‌ ನೀಡಲಾಗಿದೆ ಎನ್ನುವ ಸುದ್ದಿ ಹಬ್ಬುತ್ತಿದ್ದಂತೆ ಕೋಲಾರ ಕಾಂಗ್ರೆಸ್‌ನಲ್ಲಿ ಕೋಲಾಹಲವೇ ಆರಂಭವಾಗಿತ್ತು. ಸಚಿವ ಎಂಸಿ ಸುಧಾಕರ್‌ ಸೇರಿದಂತೆ ಹಲವು ನಾಯಕರು ಸಭಾಪತಿ ಕಚೇರಿಗೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಹಸನ ಕೂಡ ನಡೆದಿತ್ತು. ಈ ತಿಕ್ಕಾಟದಿಂದ ಬೇಸತ್ತ ಹೈಕಮಾಂಡ್‌ ಎರಡೂ ಬಣಗಳನ್ನು ಹೊರತು ಪಡಿಸಿ ಇದೀಗ ಅಚ್ಚರಿಯ ಅಭ್ಯರ್ಥಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಇನ್ನು, ಕೋಲಾರದ ಕಾಂಗ್ರೆಸ್‌ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಹೈಕಮಾಂಡ್ ಟಿಕೆಟ್ ಘೋಷಣೆಯ ಬಳಿಕ ಎರಡು ಬಣದ ನಾಯಕರ ಮುಂದಿನ ರಾಜಕೀಯ ನಡೆ ಕುತೂಹಲ ಕೆರಳಿಸಿದೆ. ಈ ಅಸಮಾಧಾನದ ಮಧ್ಯೆ ಕೆ.ವಿ ಗೌತಮ್ ಅವರು ಜೆಡಿಎಸ್‌, ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಎದುರಿಸಬೇಕಿದೆ.

ಇದನ್ನೂ ಓದಿ : ಇಂದು ಸಂಸದೆ ಸುಮಲತಾರಿಂದ ಮಹತ್ವದ ಸಭೆ : ಬಿಜೆಪಿ-ಜೆಡಿಎಸ್​ ಮೈತ್ರಿಗೆ ಕಂಟಕವಾಗ್ತಾರಾ?

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here