Download Our App

Follow us

Home » ಅಪರಾಧ » ಕೊನೆಗೂ ಪ್ರಜ್ವಲ್‌ ರೇವಣ್ಣ ಅರೆಸ್ಟ್ – ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?

ಕೊನೆಗೂ ಪ್ರಜ್ವಲ್‌ ರೇವಣ್ಣ ಅರೆಸ್ಟ್ – ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?

ಬೆಂಗಳೂರು : ಬರೋಬ್ಬರಿ ಒಂದು ತಿಂಗಳ ಕಳ್ಳಾಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಅತ್ಯಾಚಾರ, ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಕೊನೆಗೂ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಮಧ್ಯರಾತ್ರಿ 12.58ರ ಸುಮಾರಿಗೆ ಏರ್ಪೋರ್ಟ್ ಗೆ ಬರುತ್ತಿದ್ದಂತೆ ಬಿಗಿ ಪೊಲೀಸ್​ ಬಂದೋಬಸ್ತ್​ ಮಧ್ಯೆ SIT ಅಧಿಕಾರಿಗಳು ಪ್ರಜ್ವಲ್​​ನ್ನು ಬಂಧಿಸಿದ್ದಾರೆ.

ಜರ್ಮನಿಯ ಮ್ಯೂನಿಕ್‌ನಿಂದ ನಿನ್ನೆ ಮಧ್ಯಾಹ್ನ ಬೆಂಗಳೂರಿಗೆ ಪ್ರಯಾಣ ಆರಂಭಿಸಿದ ಪ್ರಜ್ವಲ್, ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಈಗಾಗಲೇ ಜನಪ್ರತಿನಿಧಿಗಳ ಕೋರ್ಟ್‌ ಪ್ರಜ್ವಲ್ ಮೇಲೆ ಅರೆಸ್ಟ್‌ ವಾರಂಟ್ ಜಾರಿ ಮಾಡಿದ್ದು, ಈ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿಯೇ ಪ್ರಜ್ವಲ್​ನನ್ನು ಬಂಧಿಸಲಾಗಿದೆ. ಸದ್ಯ ಪ್ರಜ್ವಲ್‌ ಅವರನ್ನ ಬೆಂಗಳೂರಿನ ಎಸ್‌ಐಟಿ ಕಚೇರಿಗೆ ಕರೆತರಲಾಗಿದೆ.

ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು? (May31) ಇಂದೇ ಜಡ್ಜ್​​ ಮುಂದೆ ಪ್ರಜ್ವಲ್​ ರೇವಣ್ಣರನ್ನು SIT ಹಾಜರುಪಡಿಸಲಿದೆ. ಮೆಡಿಕಲ್​ ಟೆಸ್ಟ್​ ನಂತರ ಕೋರ್ಟ್ ಮುಂದೆ SIT ಪ್ರೊಡ್ಯೂಸ್ ಮಾಡಲಿದ್ದು, ಬೌರಿಂಗ್​ ಆಸ್ಪತ್ರೆಯಲ್ಲಿ ಪ್ರಜ್ವಲ್ ಮೆಡಿಕಲ್​ ಟೆಸ್ಟ್ ಪ್ರಕ್ರಿಯೆ ನಡೆಯಲಿದೆ. ಇನ್ನು ವಿಚಾರಣೆಗಾಗಿ SIT 14 ದಿನ ಪ್ರಜ್ವಲ್​ನನ್ನು ಕಸ್ಟಡಿಗೆ  ಕೇಳಲಿದೆ.

ಕಸ್ಟಡಿಗೆ ಪಡೆದು ವಿಚಾರಣೆ ಮಾಡಲು SIT ಸಜ್ಜಾಗಿದ್ದು, ಮೊದಲಿಗೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೂರು ಅತ್ಯಾಚಾರ ಪ್ರಕರಣಗಳ ಸಂಬಂಧ ವಿಡಿಯೋ ಹೇಳಿಕೆಗಳನ್ನು ದಾಖಲಿಸಿಳ್ಳುವ ಸಾಧ್ಯತೆಯಿದೆ. ಅತ್ಯಾಚಾರ ಮಾಡಿದ್ದಾರೆ ಎನ್ನಲಾದ ಎಲ್ಲ ಸ್ಥಳಗಳಲ್ಲಿನ ಪ್ರಜ್ವಲ್‌ ರೇವಣ್ಣನಿಗೆ ಸಂಬಂಧಿಸಿದಂತಹ ಎಲ್ಲ ವಸ್ತುಗಳನ್ನು ಹಾಗೂ ಪ್ರಜ್ವಲ್ ವಿದೇಶದಿಂದ ಬರುವಾಗ ತಂದಿದ್ದ ವಸ್ತುಗಳನ್ನು ಕೂಡ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣರನ್ನ ವಿಚಾರಣೆ ಮಾಡುವ ಬಗ್ಗೆ ಅಧಿಕಾರಿಗಳು ಚರ್ಚೆ ನಡಸಿದ್ದಾರೆ. ತನಿಖಾ ತಂಡವು ಎರಡು ಆಯಾಮಗಳಲ್ಲಿ ಪ್ರಶ್ನೆಗಳನ್ನ ತಯಾರು ಮಾಡಿಕೊಂಡಿದೆ ಎಂದು ತಿಲಿದು ಬಂದಿದೆ. ಇನ್ನು ತನಿಖಾ ಹಂತದಲ್ಲಿ ತಲೆಮರೆಸಿಕೊಂಡಿದ್ದ ಬಗ್ಗೆಯೂ ಪ್ರಶ್ನೆ ಮಾಡಲಿದ್ದಾರೆ. ಇನ್ನು ಲುಕ್‌ಔಟ್‌, ಬ್ಲೂಕಾರ್ನರ್‌ ನೋಟಿಸ್ ಕೂಡ ಪ್ರಜ್ವಲ್ ವಿರುದ್ಧ ಹೊರಡಿಸಲಾಗಿತ್ತು.

ಇದನ್ನೂ ಓದಿ : ವಾಲ್ಮೀಕಿ ನಿಗಮ ಅಕ್ರಮದ ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲು – 94 ಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಪಾತ್ರವೇ ಇಲ್ಲ..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here