Download Our App

Follow us

Home » ಅಪರಾಧ » ಕೊನೆಗೂ ಫ್ಲೈಟ್ ಟಿಕೆಟ್​ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ – ಬೆಂಗಳೂರಿಗೆ ಯಾವಾಗ ಬರ್ತಾರೆ?

ಕೊನೆಗೂ ಫ್ಲೈಟ್ ಟಿಕೆಟ್​ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ – ಬೆಂಗಳೂರಿಗೆ ಯಾವಾಗ ಬರ್ತಾರೆ?

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ಫ್ಲೈಟ್ ಟಿಕೆಟ್​ ಬುಕ್ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿರುವ ಪ್ರಜ್ವಲ್ ರೇವಣ್ಣ ಈಗಾಗಲೇ ವಿಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಹೇಳಿದಂತೆ ಭಾರತಕ್ಕೆ ವಾಪಸ್​ ಮರುಳುತ್ತಿದ್ದಾರೆ‌.

ಈಗಾಗಲೇ ಎರಡು ಬಾರಿ‌ ಟಿಕೆಟ್ ಬುಕ್ ಮಾಡಿ, ಭಾರತಕ್ಕೆ ಬಾರದೇ ಅಲ್ಲಿಯೇ ವಾಸ್ತವ್ಯ ಹೂಡಿದ್ದ ಪ್ರಜ್ವಲ್ ರೇವಣ್ಣ, ಇದೀಗ ಮೇ 30 ರಂದು ಜರ್ಮಿನಿಯ ಮ್ಯೂನಿಚ್‌ನಿಂದ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಮತ್ತೆ ಮ್ಯೂನಿಚ್‌ನಿಂದ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಸತತ 9 ಘಂಟೆಗಳ ಜರ್ನಿ ಮಾಡಿ, ಮೇ 31ರ ತಡರಾತ್ರಿ 12:30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಮ್ಯೂನಿಚ್‌ನಿಂದ ಮೇ 30ನೇ ತಾರೀಖು ಸಂಜೆ ಹೊರಡುವ ಸಾಧ್ಯತೆಯಿದ್ದು, ಮಧ್ಯರಾತ್ರಿ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಟಿಕೆಟ್ ಕಾಯ್ದಿಯಿರಿಸಿದ್ದಾರೆ. Lufthansa airlines ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ಮಾಹಿತಿ ಎಸ್ಐಟಿ ಮೂಲಗಳಿಂದ ಲಭ್ಯವಾಗಿದೆ.

ಇನ್ನು ಪ್ರಜ್ವಲ್​ ರೇವಣ್ಣ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅಲರ್ಟ್​ ಆಗಿದ್ದು, ಪ್ರಜ್ವಲ್ ರೇವಣ್ಣ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದ್ದಾರೆ ಎಂದು ಇಂಚಿಚು ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಬೆಂಗಳೂರಿಗೆ ಬರಲು ಎರಡು ಬಾರಿ ವಿಮಾನ ಟಿಕೆಟ್​ ಬುಕ್ ಮಾಡಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ವಿಮಾನ ಹೊರಡುವ ಸ್ವಲ್ಪ ಸಮಯದ ಮೊದಲೇ ಟಿಕೆಟ್​ ರದ್ದು ಮಾಡಿದ್ದರು. ಈ ಮೂಲಕ ಎಸ್​ಐಟಿ ಅಧಿಕಾರಿಗಳನ್ನು ಆಟವಾಡಿಸಿದ್ದರು. ಇದೀಗ ಪ್ರಜ್ವಲ್ ರೇವಣ್ಣ ಮೇ 31ರಂದು ಬೆಂಗಳೂರಿಗೆ ಬರುವುದಾಗಿ ಹೇಳಿದ್ದು, ಇದಕ್ಕಾಗಿ ಎಸ್​ಐಟಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ : ಸೌದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದ ಶಿವಣ್ಣ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here