Download Our App

Follow us

Home » ಮೆಟ್ರೋ » ಇಂದಿನಿಂದ ಬಿಎನ್ಎ​ಸ್ ಉಲ್ಲೇಖಿಸಿ ಎಫ್​ಐಆರ್ – ಪೊಲೀಸ್‌ ಕಮಿಷನರ್‌ ಬಿ.ದಯಾನಂದ್ ಸೂಚನೆ..!

ಇಂದಿನಿಂದ ಬಿಎನ್ಎ​ಸ್ ಉಲ್ಲೇಖಿಸಿ ಎಫ್​ಐಆರ್ – ಪೊಲೀಸ್‌ ಕಮಿಷನರ್‌ ಬಿ.ದಯಾನಂದ್ ಸೂಚನೆ..!

ಬೆಂಗಳೂರು : ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರುತ್ತಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್​ ತಿಳಿಸಿದ್ದಾರೆ.

ಬಿಎನ್‌ಎಸ್ ಕಾಯ್ದೆಗಳ ಅನುಷ್ಠಾನ ಕುರಿತು ಈಗಾಗಲೇ ಇಲಾಖೆ ಎಲ್ಲ ಹಂತದ ಅಧಿಕಾರಿ ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜೊತೆಗೆ, ಮೈಸೂರು ಪೊಲೀಸ್ ಅಕಾಡೆಮಿಯಿಂದ ಕನ್ನಡದಲ್ಲೇ ಹೊಸ ಕಾಯ್ದೆಗಳ ಕನ್ನಡ ಕೈಪಿಡಿ ಸಿದ್ದಪಡಿಸಿ ವಿತರಿಸಲಾಗಿದೆ. ಅದೇ ಪ್ರಕಾರ ಪೊಲೀಸರು ಬಿಎನ್‌ಎಸ್ ಕಾಯ್ದೆಗಳನ್ನು ಉಲ್ಲೇಖಿಸಿ ಎಫ್‌ಐಆರ್ ದಾಖಲಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಕಾಯ್ದೆ ಹಾಗೂ ಕಲಂಗಳು ಎಫ್‌ಐಆರ್‌ನಲ್ಲಿ ಮಾತ್ರವಲ್ಲದೆ, ಪೊಲೀಸ್ ಐ.ಟಿ (ವೆಬ್‌ಸೈಟ್‌)ಯಲ್ಲೂ ಬದಲಾವಣೆ ಆಗಿದೆ. ಎಫ್‌ಐಆರ್ ಜತೆಗೆ ಇಲ್ಲಿಯೂ ಬಿಎನ್‌ಎಸ್, ಬಿಎನ್‌ಎಸ್‌ಎಸ್ ಮತ್ತು ಬಿಎಸ್‌ಎ ಕಾಯ್ದೆಗಳ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುವಂತೆ ಸಿದ್ದಪಡಿಸಲಾಗಿದೆ.

ಇದನ್ನೂ ಓದಿ : ದೇಶದಲ್ಲಿ ಇಂದಿನಿಂದ ಮೂರು ಹೊಸ ಅಪರಾಧ ಕಾನೂನು ಜಾರಿಗೆ – ಏನೆಲ್ಲ ಬದಲಾವಣೆ? ಇಲ್ಲಿದೆ ಡೀಟೇಲ್ಸ್..

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here