Download Our App

Follow us

Home » ರಾಜಕೀಯ » ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ಸಜ್ಜಾದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ?

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲು ಸಜ್ಜಾದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ?

ಮಂಡ್ಯ : ಲೋಕಸಭಾ ಚುಣಾವಣೆಗೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರುವ ಸಾಧ್ಯತೆಯಿದೆ. ನಾರಾಯಣಗೌಡ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಜೆಡಿಎಸ್-ಬಿಜೆಪಿ ಮೈತ್ರಿ ಘೋಷಣೆ ಬಳಿಕ ಪಕ್ಷದ ನಾಯಕರ ವಿರುದ್ಧ ನಾರಾಯಣಗೌಡ ತೀವ್ರ ಅಸಮಾಧಾನಗೊಂಡಿದ್ದಾರೆ. ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ನಾರಾಯಣಗೌಡಗೆ ಮನಸ್ಸಿಲ್ಲ. ಮಂಡ್ಯ ಕ್ಷೇತ್ರ ಬಹುತೇಕ ಬಿಜೆಪಿಗೆ ಕೈತಪ್ಪುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ನಾರಾಯಣಗೌಡ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ನಾರಾಯಣಗೌಡ ಕಾಂಗ್ರೆಸ್​ನಿಂದ ಲೋಕಸಭೆಗೆ ನಿಲ್ಲಲು ಟಿಕೆಟ್​ ಕೇಳಿದ್ದರು, ಈ ವೇಳೆ ಸಿಎಂ ಸಿದ್ದರಾಮಯ್ಯ ಟಿಕೆಟ್​ ಬೇಡಿಕೆ ತಿರಸ್ಕರಿಸಿದ್ದು, ಮೊದಲೇ ಕಾಂಗ್ರೆಸ್ ಸೇರುವಂತೆ ಹೇಳಿದ್ದೆ ಆಗ ಬಂದಿದ್ರೆ ಅವಕಾಶ ಸಿಗ್ತಿತ್ತು, ಮೊದಲು ಪಕ್ಷ ಸೇರಿ ಬಳಿಕ ಸ್ಥಾನಮಾನ ಒದಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ನಾರಾಯಣಗೌಡ ಶೀಘ್ರವೇ ಕಾಂಗ್ರೆಸ್​ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here