ಬೆಂಗಳೂರು : ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ಮೋದಿ ಅವರು ಕರೆ ಕೊಟ್ಟಿದ್ದರು. ಈ ಹಿನ್ನೆಲೆ ‘ರಾಮಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ’ ವನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಜಯನಗರದ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಹಾಗೂ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸುವ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಣ ಖಾತೆಯಲ್ಲಿ ಹಂಚಿಕೊಂಡಿದ್ದರು. ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಂಚಿಕೊಂಡ ಈ ಫೋಟೋಗೆ ಕಾಂಗ್ರೆಸ್ ಮಾಜಿ ಶಾಸಕಿ ಸೌಮ್ಯ ರೆಡ್ಡಿಯವರು ವಿರೋಧ ಪಕ್ಷದ ನಾಯಕರಾದರು ನಿಮ್ಮೊಟ್ಟಿಗೆ ಸ್ಥಳೀಯ ಸಂಸದರೇ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಮಾಜಿ ಶಾಸಕಿ ಸೌಮ್ಯ ರೆಡ್ಡಿಯವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ “ಇದು ಫೋಟೋಶೂಟ್’ಗೆ ಸೀಮಿತನ ಅಥವಾ ಪ್ರತಿದಿನ ಇದೇ ರೀತಿ ಎಲ್ಲಾ ಕಡೆ ಸ್ವಚ್ಛತಾ ಕಾರ್ಯ ಕೈಗೊಳ್ಳುವಿರಾ? ನಿಮ್ಮ ಸ್ವಂತ ಕ್ಷೇತ್ರದಲ್ಲಿ ಎಲ್ಲಾ ಮಾಜಿ ಪಾಲಿಕೆ ಸದಸ್ಯರು ಹಾಗೂ ಮುಖಂಡರು ನಿಮ್ಮ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ ಸೇರಿಬಿಟ್ಟಿದ್ದಾರೆ.
ಇಲ್ಲಿ ನೀವು ನೋಡಿದರೆ ನಿಮ್ಮ ಕ್ಷೇತ್ರ ಬಿಟ್ಟು ಪಕ್ಕದ ಜಯನಗರಕ್ಕೆ ಬಂದು ಸಂಸದರಿಲ್ಲದೇ, ಪಾಪ ಒಬ್ಬರೇ ಸ್ವಚ್ಛತೆ ಮಾಡುತ್ತಿದ್ದೀರಾ. ನಮ್ಮನ್ನು ಕರೆದಿದ್ದರೆ ನಾವಾದರೂ ಬರುತ್ತಿದ್ವಿ” ಎಂದು ಬರೆದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಗೆ ಟಾಂಗ್ ಕೊಟ್ಟಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿದ್ದರೂ ಸಹ ಸಂಸದರ ಬೆಂಬಲವಿಲ್ಲದೆ ನೀವು ಒಬ್ಬೊಂಟಿ ಎಂಬುದು ಇದರಿಂದಲೇ ತಿಳಿಯುತ್ತದೆ!!
ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರೇ .. ಎಲ್ಲಿದೀರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ : 55 ಲಕ್ಷ ಮೊತ್ತದಲ್ಲಿ ಲೀಲಾವತಿ ಅಮ್ಮನವರ ಸ್ಮಾರಕ ನಿರ್ಮಾಣ.. ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್ ಕುಟುಂಬ..!
Post Views: 594