Download Our App

Follow us

Home » ರಾಜಕೀಯ » ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾದ ಸಿ.ಪಿ. ಯೋಗೇಶ್ವರ್..!

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾದ ಸಿ.ಪಿ. ಯೋಗೇಶ್ವರ್..!

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಸಂಜೆ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ.

ಯೋಗೇಶ್ವರ್‌ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸ್ಪರ್ಧೆಗೆ ಸಿದ್ದತೆ ಮಾಡಿಕೊಳ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್‌ ಭೇಟಿ ಮಹತ್ವ ಪಡೆದುಕೊಂಡಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್‌, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್‌, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ವ್ಯಾಪ್ತಿಗೆ ಬರುತ್ತದೆ. 8 ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್‌ ಇದ್ದರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ಡಿ ಕುಮಾರಸ್ವಾಮಿ ಇದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ 25ರಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದಿತ್ತು. ಡಿಕೆ ಸುರೇಶ್‌ ಅವರು ರಾಜ್ಯದ ಏಕೈಕ ಕಾಂಗ್ರೆಸ್‌ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ : ಬೆಂಗಳೂರು : ಖಾಸಗಿ ಆಸ್ಪತ್ರೆ ನರ್ಸ್​ಗಳು ಚಿನ್ನದ ಸರ ಕದ್ದಿರುವ ಆರೋಪ – ನರ್ಸ್​ಗಳ ವಿರುದ್ಧ FIR ದಾಖಲು..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here