Download Our App

Follow us

Home » ರಾಜಕೀಯ » ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರ ಕುಟುಂಬ..!

ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರ ಕುಟುಂಬ..!

ಬೆಂಗಳೂರು : ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ ತೆರಳಿದೆ.

ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ  ಹೆಚ್.ಡಿ ದೇವೇಗೌಡರು, ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ನಾಳೆ ರಾಮ ಮಂದಿರ ಉದ್ಘಾಟನೆಯಲ್ಲಿ ಕುಟುಂಬ ಸಮೇತರಾಗಿ ಹೆಚ್‌.ಡಿ ದೇವೇಗೌಡ್ರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ನಾಳೆ ಸಂಜೆಯೇ ದೇವೇಗೌಡ್ರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ : ಮಂಗಳೂರು ನಗರದಾದ್ಯಂತ ಪೊಲೀಸರ ಕಟ್ಟೆಚ್ಚರ..!

Leave a Comment

DG Ad

RELATED LATEST NEWS

Top Headlines

ವಾಲ್ಮೀಕಿ ಹಗರಣ – ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ 10 ಕೆ.ಜಿ‌ ಚಿನ್ನದ ಬಿಸ್ಕೆಟ್ SIT ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ತನಿಖೆಯನ್ನ SIT ಚುರುಕುಗೊಳಿಸಿದೆ. ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ ಬರೋಬ್ಬರಿ 10 ಕೆ.ಜಿ‌ ಚಿನ್ನದ

Live Cricket

Add Your Heading Text Here