ಚಿತ್ರದುರ್ಗ : ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣ ಸಂಬಂಧವಾಗಿ ಮುರುಘಾಮಠಕ್ಕೆ ಆಡಳಿತ ಸಮಿತಿ ನೇಮಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 3 ದಿನದಲ್ಲಿ ಆಡಳಿತ ಸಮಿತಿ ನೇಮಿಸಲು ಕೋರ್ಟ್ ಸೂಚಿಸಿತ್ತು. ಫೆಬ್ರವರಿ 28ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.
ಆಡಳಿತ ಸಮಿತಿ ಅದ್ಯಕ್ಷರಾಗಿ ನಿವೃತ್ತ IAS ಅಧಿಕಾರಿ ಶಿವಯೋಗಿ ಸಿ ಕಳಸದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಮುರುಘಾ ಸ್ವಾಮೀಜಿ ಜಾಮೀನು ಮೇಲಿದ್ದು, ಅವರ ನಿಯಂತ್ರಣದಲ್ಲಿರುವ ಆಡಳಿತ ಪ್ರಶ್ನಿಸಿ ಮಾಜಿ ಸಚಿವ ಹೆಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿ ಸರ್ಕಾರಕ್ಕೆ ನೋಟಿಸ್ ನೀಡಿದ್ದ ಸುಪ್ರೀಂಕೋರ್ಟ್ ಸೂಚನೆಯಂತೆ ಮಠಕ್ಕೆ ಸರ್ಕಾರ ಆಡಳಿತ ಸಮಿತಿ ಅಧ್ಯಕ್ಷರ ನೇಮಿಸಿದೆ.
ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು.
ಹಾಗೆಯೇ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆ ಹಿನ್ನೆಲೆಯಿಂದಾಗಿ ಸರ್ಕಾರ ಆಡಳಿತ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ವ್ಯಕ್ತಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆ..!