ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ನಿಗೂಢ ಕೆಲಸಕ್ಕಾಗಿ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಧರ್ಮಸ್ಥಳ ಪೊಲೀಸರು ಯುವಕರನ್ನು ತಪಾಸಣೆ ನಡೆಸಿದಾಗ 42 ಅಕ್ರಮ ಸಿಮ್ಗಳು ಪತ್ತೆಯಾಗಿದೆ.
ಯುವಕರ ತಂಡ ಅನುಮಾನಾಸ್ಪದ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ.
ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. 20 ವರ್ಷದ ರಮೀಝ್ , 24 ವರ್ಷದ ಅಕ್ಬರ್ ಅಲಿ, 22 ವರ್ಷದ ಮೊಹಮ್ಮದ್ ಮುಸ್ತಫಾ, 27 ವರ್ಷದ ಮೊಹಮ್ಮದ್ ಸಾಧಿಕ್ ಬಂಧಿತ ಆರೋಪಿಯಾಗಿದ್ದು, ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಒಳಗೊಂಡಿದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ಫಾರಿನ್ ಲಿಂಕ್ ಇರೋದ್ರಿಂದ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಸ್ನೇಹಿತನ ಜೊತೆ ಮಾಲ್ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಮಹಿಳೆ ಮನೆ ಮೇಲೆ ದಾಳಿ..!