ಬೆಂಗಳೂರು : ರಸ್ತೆ ಬದಿಯಲ್ಲಿ ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಪರಿಣಾಮ ಓರ್ವ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಓಡಿಶಾ ಮೂಲದ 23ವ ವರ್ಷದ ಸಾಗರ್ ಸಾವನ್ನಪ್ಪಿದ ಯುವಕ. ಕಳೆದ ರಾತ್ರಿ 10:30ರ ವೇಳೆ ವೇಗವಾಗಿ ಬಂದ ಐವರು ಪ್ರಯಾಣಿಕರಿದ್ದ ಕಾರು ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯ ಬಾಲಗತ್ ಜಂಕ್ಷನ್ ಬಳಿ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ನಾಲ್ವರು ಟೆಕ್ಕಿಗಳು ಗಾಯಗೊಂಡಿದ್ದಾರೆ.
ಸದ್ಯ ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನೆಯ ಬಗ್ಗೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೋಲಾರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ- ಒರ್ವ ವಶಕ್ಕೆ, ಮತ್ತೊಬ್ಬ ಪರಾರಿ..!
Post Views: 164