ಉತ್ತರ ಪ್ರದೇಶ : ಜ್ಞಾನವಾಪಿ ಪ್ರಕರಣ ಸಂಬಂಧ ಮುಸ್ಲಿಂ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಜ್ಞಾನವಾಪಿಯಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು, ಪೂಜೆಗೆ ಅವಕಾಶ ನೀಡಿರುವ ಆದೇಶ ಪ್ರಶ್ನಿಸಿ ಮುಸ್ಲಿಂ ಸಮುದಾಯ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು.
ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಇದೀಗ ನಿಮ್ಮ ಅರ್ಜಿಯು ವಿಚಾರಣೆಗೆ ಯೋಗ್ಯವಲ್ಲ ಎಂದು ಕೋರ್ಟ್ ವಜಾ ಮಾಡಿದೆ. ಸಿಂಗಾರಿ ಗೌರಿ, ನಂದಿ ವಿಗ್ರಹದ ಪೂಜೆಗೆ ಕೋರ್ಟ್ ಅವಕಾಶ ಕಲ್ಪಿಸಿದ್ದು, ಕಾಶಿ ಅರ್ಚಕರಿಗೆ ಬೆಳಗ್ಗೆ, ಸಂಜೆ ಪೂಜೆ ಸಲ್ಲಿಕೆ ಮಾಡಲು ಅವಕಾಶ ಸಿಕ್ಕಿತ್ತು.
ಆದರೆ ವಾರಾಣಸಿ ಕೋರ್ಟ್ ನ ಆದೇಶ ಪ್ರಶ್ನಿಸಿ ಮುಸ್ಲಿಂ ಸಮುದಾಯದಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ದೇಗುಲ ಕೆಡವಿ ಮಸ್ಜಿದ್ ನಿರ್ಮಾಣ ಮಾಡಿಕೊಂಡಿದ್ದ ಆರೋಪವಿದ್ದು, ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ತಜ್ಞರು ಸರ್ವೆ ಮಾಡಿ ವರದಿ ಸಲ್ಲಿಸಿದ್ದರು.
ಇದನ್ನೂ ಓದಿ : ಇಂದು ಸುರಪುರ MLA ರಾಜಾ ವೆಂಕಟಪ್ಪ ನಾಯಕ ಅವರ ಅಂತ್ಯ ಸಂಸ್ಕಾರ..!