Download Our App

Follow us

Home » ಸಿನಿಮಾ » ‘ಗೋಪಿಲೋಲ’ ಸಿನಿಮಾದ ಎರಡನೇ ಸಾಂಗ್​​​ ರಿಲೀಸ್..!

‘ಗೋಪಿಲೋಲ’ ಸಿನಿಮಾದ ಎರಡನೇ ಸಾಂಗ್​​​ ರಿಲೀಸ್..!

ಆರ್ ರವೀಂದ್ರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಗೋಪಿಲೋಲ’ ಸಿನಿಮಾದ ಎರಡನೇ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಡೆಯಿತು. ಈ ಚಿತ್ರದ ನಿನ್ನೆ ನಿನ್ನೆ ನೆಚ್ಚಿಕೊಂಡೆ ಎಂಬ ಹಾಡನ್ನು ಹಿರಿಯ ‌ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ಉಮೇಶ್ ಬಣಕಾರ್ ಅನಾವರಣ ಮಾಡಿದರು.

ನಿನ್ನೆ ನಿನ್ನೆ ನೆಚ್ಚಿಕೊಂಡೆ ಎಂಬ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದು, ಅನುರಾಧ ಭಟ್ ಹಾಗೂ ರಾಜೇಶ್ ಕೃಷ್ಣನ್ ಧ್ವನಿಯಾಗಿದ್ದು, ಮಿದುನ್ ಅಸೋಕನ್ ಚೆನ್ನೈ ಟ್ಯೂನ್ ಹಾಕಿದ್ದಾರೆ. ನಾಯಕ ಮಂಜುನಾಥ್ ಅರಸು ನಾಯಕಿ ನಿಮಿಷಾ ಕೆ ಚಂದ್ರ ಮೆಲೋಡಿ ಗೀತೆಗೆ ಹೆಜ್ಜೆ ಹಾಕಿದ್ದಾರೆ.

ಸಾಂಗ್​​ ರಿಲೀಸ್​​ ಬಳಿಕ ಈ ಬಗ್ಗೆ ಮಾತನಾಡಿದ ರಾಜೇಂದ್ರ ಸಿಂಗ್ ಬಾಬು ಅವರು, ಒಂದು ಸಾಂಗ್ ನಾವು ನೋಡುತ್ತವೆ. ಆದರೆ ಆ ಹಾಡಿನ ಹಿಂದೆ ಎಷ್ಟು ಕೆಲಸ ಮಾಡಿರುತ್ತಾರೆ ಎಂದರೆ ಮೇಕಪ್, ಪ್ರೊಡಕ್ಷನ್, ಪ್ರೊಡಕ್ಷನ್ ಮ್ಯಾನೇಜರ್, ಕಾಸ್ಟ್ಯೂಮ್ ಡಿಸೈನ್ ಈ ರೀತಿ ಹಲವರ ಪ್ರಯತ್ನ ಇರುತ್ತದೆ. ಈ ಹಾಡನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಲೋಕೇಷನ್, ನಟನೆ ಓವರ್ ಆಗಿ ಮಾಡದೇ ಹಾಡಿಗೆ ಎಷ್ಟು ಬೇಕೋ‌ ಅಷ್ಟೂ ಮಾಡಿದ್ದಾರೆ. ನಿರ್ದೇಶಕರು, ಕೊರಿಯೋಗ್ರಫರ್ ಎಲ್ಲರೂ ಅದ್ಭುತ ಕೆಲಸ ಮಾಡಿದ್ದಾರೆ. ಎಲ್ಲಿಯೂ ಹೊಸಬರು ಎನ್ನುವಂತೆ ಕಾಣುವುದಿಲ್ಲ. ಇವತ್ತಿನ ದಿನಗಳಲ್ಲಿ ಮೊದಲಿನ ಮ್ಯೂಸಿಕ್ ಅಂದಿನ ಮ್ಯೂಸಿಕ್ ವ್ಯತ್ಯಾಸ ಇದೆ. ಇಂಡಿಯನ್ ಸಿನಿಮಾಗಳಲ್ಲಿ ಹಾಡುಗಳು ಇಲ್ಲದೇ ಇದ್ದರೆ ಸಿನಿಮಾ ಪೂರ್ಣವಾಗಿ ಇರುವುದಿಲ್ಲ ಎಂದು ತಿಳಿಸಿದರು.

ನಿರ್ಮಾಪಕರಾದ ಎಸ್.ಆರ್.ಸನತ್ ಕುಮಾರ್ ಮಾತನಾಡಿ, ಇದು ನಮ್ಮ ನಾಲ್ಕನೇ ಸಿನಿಮಾ. ನಮಗೆ ಸಿನಿಮಾ ಫ್ಯಾಷನ್. ಪುನೀತ್ ಸರ್ ಬಳಿ ಹೋಗಿ ಕಥೆ ಹೇಳಿದರು. ನಾನು ಮಾಡುತ್ತೇನೆ. ಮೂರು ವರ್ಷ ಟೈಮ್ ಬೇಕು ಎಂದರು. ಕಥೆ ಚೆನ್ನಾಗಿದೆ. ಒಂದಕ್ಕಿಂತ ಒಂದು ಹಾಡುಗಳು ಚೆನ್ನಾಗಿ ಇವೆ ಎಂದರು.

ಇನ್ನು ಸಹಜ ಕೃಷಿ ಹಾಗೂ ಪ್ರೇಮ ಕಥಾಹಂದರ ಹೊಂದಿರುವ ಗೋಪಿಲೋಲ ಸಿನಿಮಾಗೆ ಎಸ್.ಆರ್. ಸನತ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸಹ ನಿರ್ಮಾಪಕರಾಗಿ ಚಿತ್ರದ ನಾಯಕ ಮಂಜುನಾಥ್ ಸಾಥ್ ಕೊಟ್ಟಿದ್ದಾರೆ‌. ಮಂಜುನಾಥ್ ಅವರಿಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಾಸಂತಿ, ಕೆಂಪೇಗೌಡ, ಡಿಗ್ರಿ ನಾಗರಾಜ್, ರೇಖಾ ದಾಸ್, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

‘ಗೋಪಿಲೋಲ’ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ : ಅಗ್ನಿಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್​ ಸುಧೀರ್​-ಸೋನಲ್..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here