Download Our App

Follow us

Home » ರಾಜ್ಯ » ಕಣ್ಣಿನ ಆಪರೇಷನ್​ಗೆ ವರದಾನವಾದ ಗೃಹಲಕ್ಷ್ಮಿ ಹಣ – ರಾಜ್ಯ ಸರ್ಕಾರಕ್ಕೆ ಮಹಿಳೆಯಿಂದ ಕೃತಜ್ಞತೆ..!

ಕಣ್ಣಿನ ಆಪರೇಷನ್​ಗೆ ವರದಾನವಾದ ಗೃಹಲಕ್ಷ್ಮಿ ಹಣ – ರಾಜ್ಯ ಸರ್ಕಾರಕ್ಕೆ ಮಹಿಳೆಯಿಂದ ಕೃತಜ್ಞತೆ..!

ಬೆಳಗಾವಿ : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಸದುಪಯೋಗವನ್ನು ರಾಜ್ಯದ ಮಹಿಳೆಯರು ಪಡೆಯುತ್ತಿದ್ದಾರೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿರುವುದು ತಿಳಿದು ಬಂದಿತ್ತು. ಇದೀಗ ಬಡ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದ ಸಹಾಯದಿಂದ ತನ್ನ ಗಂಡನ ಕಣ್ಣಿನ ಆಪರೇಷನ್ ಮಾಡಿರುವ ಘಟನೆಯೊಂದು ನಡೆದಿದೆ.

ಗೃಹಲಕ್ಷ್ಮೀ ಯೋಜನೆಯಿಂದ ಬೆಳಗಾವಿಯ ಅನಗೋಳದ ಅನಿತಾ ಪತಿ ಚಂದ್ರಶೇಖರ್ ಬಡಿಗೇರಗೆ ಕಣ್ಣಿನ ಆಪರೇಷನ್ ಮಾಡಿಸಿದ್ದಾರೆ. ಅನಿತಾ ಪತಿ ಚಂದ್ರಶೇಖರ್ ದೃಷ್ಠಿ ದೋಷದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅನಿತಾ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟಿದ್ದರು.

ಗೃಹಲಕ್ಷ್ಮಿಯಿಂದ ಬಂದ 18 ಸಾವಿರ ರೂ. ಮತ್ತು ತನ್ನ ಬಳಿ ಇದ್ದ 10 ಸಾವಿರ ಹಣ ಸೇರಿಸಿ ಪತಿ ಚಂದ್ರಶೇಖರ್​ ಅವರ ಕಣ್ಣಿನ ಆಪರೇಷನ್​ ಮಾಡಿಸಿದ್ದಾರೆ. ಪತಿಯ ಕಣ್ಣಿನ ಆಪರೇಷನ್​ಗೆ ಗೃಹಲಕ್ಷ್ಮಿ ಹಣ ನೆರವಾಗಿದ್ದಕ್ಕೆ ಅನಿತಾ, ವಿಡಿಯೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ : ಕಿಚ್ಚನ ಹುಟ್ಟುಹಬ್ಬಕ್ಕೆ ‘ಮ್ಯಾಕ್ಸ್’ ಚಿತ್ರದ ಫಸ್ಟ್​​ ಸಾಂಗ್​​ ರಿಲೀಸ್​​ – ರಡಗ್​​ ಆಗಿ ಎಂಟ್ರಿ ಕೊಟ್ಟ ಬಾದ್​​ಷಾ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here