Download Our App

Follow us

Home » ಜಿಲ್ಲೆ » ಹನುಮಧ್ವಜ ತೆರವು ವಿವಾದ : ಇಂದು ಮಂಡ್ಯ ನಗರ ಬಂದ್‌..!

ಹನುಮಧ್ವಜ ತೆರವು ವಿವಾದ : ಇಂದು ಮಂಡ್ಯ ನಗರ ಬಂದ್‌..!

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿದ್ದನ್ನು ಖಂಡಿಸಿ ಹಿಂದೂ ಸಂಘಟನೆಗಳು ಇಂದು ಮಂಡ್ಯ ನಗರ ಬಂದ್‌ಗೆ ಕರೆ ಕೊಟ್ಟಿದೆ. ಬಾವುಟ ತೆರವು ಮಾಡಿದ ಕ್ಷಣದಿಂದಲೂ ಬೂದಿಮುಚ್ಚಿದ ಕೆಂಡದಂತಿರೋ ಕೆರಗೋಡು ಗ್ರಾಮದಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ.

ಬೆಳಗ್ಗೆ 9 ಗಂಟೆ ನಂತರ ಹೋರಾಟಗಾರರು ಬೈಕ್​ ರ್ಯಾಲಿ ಆರಂಭಿಸಲಿದ್ದಾರೆ. ಭಜರಂಗದಳ, ವಿಶ್ವ ಹಿಂದೂಪರಿಷತ್ ಹಾಗೂ ಶ್ರೀರಾಮ ಭಜನಾ ಮಂಡಳಿ ಮಂಡ್ಯ ನಗರ ಹಾಗೂ ಕೆರಗೋಡು ಗ್ರಾಮ ಬಂದ್​ಗೆ ಮುಂದಾಗಿವೆ. ಸಂಜೆ 6 ಗಂಟೆಯವರೆಗೂ ಈ ಬಂದ್​ನ ಬಿಸಿ ಇರಲಿದೆ.

ನಗರದ ಅಂಗಡಿ ವ್ಯಾಪಾರಿಗಳಿಗೆ ಗುಲಾಬಿ ಹೂ ನೀಡಿ ಮನವಿ ಮಾಡಿದ್ದು, ಕೆರಗೋಡುವಿನಿಂದ ಮಂಡ್ಯವರೆಗೂ ಬೃಹತ್​ ಮೆರವಣಿಗೆ ನಡೆಯಲಿದೆ. ಮೊದಲು ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದು, ಬಳಿಕ ಅಲ್ಲಿಂದ ನೂರಾರು ಬೈಕ್​ಗಳ ಮೂಲಕ ಮಂಡ್ಯಕ್ಕೆ ಬರಲಿದ್ದಾರೆ. ಸಿಲ್ವರ್ ಜುಬಿಲಿ ಪಾರ್ಕ್‌ನಲ್ಲಿರುವ ಆಂಜನೇಯನ ದೇವಾಲಯದಿಂದ ಡಿಸಿ ಕಚೇರಿವರೆಗೆ ಬೃಹತ್‌ ಪ್ರತಿಭಟನೆ ರ್ಯಾಲಿ ನಡೆಸಲಿದ್ದಾರೆ.

ಬಂದ್ ಬಗ್ಗೆ ಮಂಡ್ಯ ಬಿಜೆಪಿ ಮುಖಂಡ ಅಶೋಕ್​​​ ಜಯರಾಂ ಪ್ರತಿಕ್ರಿಯಿಸಿ, ಬಂದ್​ಗೆ ಬಿಜೆಪಿ, ಜೆಡಿಎಸ್ ಬೆಂಬಲ ಸೂಚಿಸಿಲ್ಲ. ಅಂಗಡಿ ಮುಗ್ಗಟ್ಟು ಬಲವಂತವಾಗಿ ಮುಚ್ಚಿಸುವುದಿಲ್ಲ, ಜನರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ರೆ ಸ್ವಾಗತಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ‘ಉಪಾಧ್ಯಕ್ಷ’ ಸಿನಿಮಾ ಯಶಸ್ಸಿನ ಸಂಭ್ರಮದಲ್ಲಿ ಚಿಕ್ಕಣ್ಣ ಹಾಗೂ ಚಿತ್ರತಂಡ…!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here