Download Our App

Follow us

Home » ಸಿನಿಮಾ » ಸಚಿವ ಪ್ರಹ್ಲಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ – ಸಚಿವರಿಂದ ಸೂಕ್ತ ಕ್ರಮದ ಭರವಸೆ..!

ಸಚಿವ ಪ್ರಹ್ಲಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ – ಸಚಿವರಿಂದ ಸೂಕ್ತ ಕ್ರಮದ ಭರವಸೆ..!

ಹುಬ್ಬಳ್ಳಿ : ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ‌ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಪ್ರಹ್ಲಾದ್ ಜೋಶಿ ಅವರಲ್ಲಿ ದಂಪತಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಹ್ಲಾದ ಜೋಶಿ ಮಾತನಾಡಿ, ಇಂತಹ ಘಟನೆ ನಡೆಯಬಾರದಿತ್ತು, ಇದು ಖಂಡನೀಯ ವಿಚಾರ, ನಿಮ್ಮ ಜೊತೆಯಲ್ಲೇ ಈ ತರಹದ ಘಟನೆ ನಡೆದಿದಲ್ಲಿ ಸಾಮಾನ್ಯ ಜನರ ಕಥೆ ಏನಾದೀತು ಎಂದು ಅಭಿಪ್ರಾಯ ಪಟ್ಟಿದ್ದಾರೆ. ನಿಮ್ಮ ಸುರಕ್ಷತೆಯ ಬಗ್ಗೆ ನೀವು ಚಿಂತಿಸಬೇಡಿ ಕೇಂದ್ರ ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ. ಚುನಾವಣೆ ಮುಗಿದ ಕೂಡಲೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಒಂದು ಶಾಶ್ವತವಾದ ಸೂಕ್ತ ಪರಿಹಾರ ಕಂಡು ಹಿಡಿಯುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಘಟನೆಯ ಹಿನ್ನಲೆ : ನಟಿ ಹರ್ಷಿಕಾ ಪೂಣಚ್ಚ ದಂಪತಿಗಳು ರಾತ್ರಿ ವೇಳೆ ಬೆಂಗಳೂರಿನ ಫ್ರೇಜರ್ ಟೌನ್ ಬಳಿಯ ರೆಸ್ಟೋರೆಂಟ್​ನಲ್ಲಿ ಊಟ ಮುಗಿಸಿ ಹೊರ ಬರುತ್ತಿದ್ದರು. ಈ ಸಂದರ್ಭ 25-30 ಕ್ಕೂ ಹೆಚ್ಚು ಜನರ ಗುಂಪು ಕನ್ನಡದಲ್ಲಿ ಮಾತನಾಡಬೇಡಿ ಎಂದು ಕಿರಿಕ್ ತೆಗೆದು ಹರ್ಷಿಕಾ ಮತ್ತು ಪತಿ ಭುವನ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆದ ಕೂಡಲೇ ಹರ್ಷಿಕಾ ಪೂಣಚ್ಚ ಆರ್​​.ಆರ್​​.ನಗರ ಇನ್ಸ್​ಪೆಕ್ಟರ್​ಗೆ ಕರೆ ಮಾಡಿ ಮಾಡಿದ್ದಾರೆ. ಈ ವೇಳೆ ಅವಾಜ್ ಹಾಕಿದ ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ಘಟನೆಯ ಬಗ್ಗೆ ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಮಗಾದ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ‘ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ’ ಎಂದು ಅವರು ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ : ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here