ಬೆಂಗಳೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಇಂದು ಬಿಜೆಪಿ- ಜೆಡಿಎಸ್ ಮೈತ್ರಿ ಪಕ್ಷದ ನಾಯಕರ ಮಹತ್ವದ ಸಭೆ ನಡೆಯಲಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸಾಥ್ ನೀಡಿದ್ದಾರೆ.
BJP-JDS ಮೈತ್ರಿ ಬಳಿಕ ಇದು ರಾಜ್ಯ ನಾಯಕರ ಮೊದಲ ದೊಡ್ಡ ಮೀಟಿಂಗ್ ಆಗಿದ್ದು, 3 ದಿನಗಳ ಹಿಂದೆ HDK ಬಿಜೆಪಿ ಹೈಕಮಾಂಡ್ನ್ನು ಭೇಟಿ ಮಾಡಿದ್ದರು. ಹೆಚ್.ಡಿ ಕುಮಾರಸ್ವಾಮಿಯವರು ಸೀಟು ಹಂಚಿಕೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದರು. ಇಂದಿನ ಸಭೆಯಲ್ಲಿ JDSಗೆ ಬಿಟ್ಟು ಕೊಡಬಹುದಾದ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಮಂಡ್ಯ, ಹಾಸನ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದ ಪೈಕಿ 3 ಕ್ಷೇತ್ರ ಬಿಟ್ಟುಕೊಡುವ ಸಾಧ್ಯತೆಯಿದೆ.
3 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಇಂದೇ ತೀರ್ಮಾನಿಸುವ ಸಾಧ್ಯತೆಯಿದ್ದು, ಬಿಜೆಪಿ ಸ್ಪರ್ಧೆ ಮಾಡುವ 25 ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲದ ರಣತಂತ್ರ ನಡೆಸಿದೆ.
ಬಿಜೆಪಿ-ಜೆಡಿಎಸ್ ನಾಯಕರು ಇಂದು ಪ್ರಮುಖವಾಗಿ ಮಂಡ್ಯ ಕ್ಷೇತ್ರದ ಬಗ್ಗೆ ಚರ್ಚಿಸಲಿದ್ದಾರೆ. ಸುಮಲತಾ ನಡೆ, ಅವರನ್ನು ಮನವೊಲಿಸುವ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ಇದನ್ನೂ ಓದಿ : ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಂದೇ ಶ್ರೀರಾಮನ ದೇವಾಲಯ ಉದ್ಘಾಟಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!