Download Our App

Follow us

Home » ರಾಜಕೀಯ » ಬಂಧನ ಭೀತಿ : ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ಹೆಚ್.ಡಿ ರೇವಣ್ಣ..!

ಬಂಧನ ಭೀತಿ : ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ಹೆಚ್.ಡಿ ರೇವಣ್ಣ..!

ಬೆಂಗಳೂರು : ಹಾಸನದ ಅಶ್ಲೀಲ ಪೆನ್​​​ಡ್ರೈವ್ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜಾಮೀನಿ ಮೊರೆ ಹೋಗಿದ್ದಾರೆ. ಬಂಧನ ಭೀತಿಯ ಕಾರಣದಿಂದ ಎಚ್.‌ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ಪರವಾಗಿ ಅವರ ವಕೀಲರು ಸಲ್ಲಿಸಿರುವ ಅರ್ಜಿ ಸಲ್ಲಿಕೆಯಾಗಿದ್ದು. ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ಈಗಾಗಲೇ ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿರುವ ದೂರು ಆಧರಿಸಿ ತನಿಖೆ ಶುರುವಾಗಿದೆ. SIT ವಿಚಾರಣೆಗೆ ಗೈರಾಗಿದ್ದ ಮಾಜಿ ಸಚಿವ ಹೆಚ್​.ಡಿ.ರೇವಣ್ಣಗೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ವಿಚಾರಣೆ ನಡೆಸಲಿದ್ದಾರೆ.

ನಿನ್ನೆ ವಿಶೇಷ ಕೋರ್ಟ್ ತುರ್ತು ವಿಚಾರಣೆ ಕೈಗೆತ್ತಿಕೊಂಡಿದ್ದು, ಆಕ್ಷೇಪಣೆ ಸಲ್ಲಿಸಲು SITಗೆ ನೋಟಿಸ್​ ನೀಡಿ ವಿಚಾರಣೆ ಮುಂದಕ್ಕೆ ಹಾಕಿದ್ದಾರೆ. ಇಂದು ಮತ್ತೆ ವಿಶೇಷ ಕೋರ್ಟ್​ ಅರ್ಜಿ ವಿಚಾರಣೆ ನಡೆಸಲಿದೆ. SIT ರೇಪ್​​ ಕೇಸ್​ ದಾಖಲಿಸಿದೆ, ಗೃಹ ಸಚಿವರು ಅರೆಸ್ಟ್ ಮಾಡ್ತೇವೆ ಎಂದಿದ್ದಾರೆ. ಹೀಗಾಗಿ ಅರ್ಜಿದಾರರಿಗೆ ಮಧ್ಯಂತರ ಜಾಮೀನು ನೀಡುವಂತೆ ವಕೀಲರು ವಾದ ಮಂಡಿಸಲಿದ್ದಾರೆ. ಹೆಚ್​.ಡಿ.ರೇವಣ್ಣ ಬೇಲ್​ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ರಾಯ್​ ಬರೇಲಿಯಿಂದ ರಾಹುಲ್​​ ಗಾಂಧಿ ಸ್ಪರ್ಧೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here