ಬೆಂಗಳೂರು : ಹಾಸನ ಅಶ್ಲೀಲ ವಿಡಿಯೋ ಹಾಗೂ ಹೆಚ್ ಡಿ ರೇವಣ್ಣ ವಿರುದ್ಧದ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು, ರೇವಣ್ಣ ಅವರ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಆ ಘಟನೆ ಬಗ್ಗೆ ಕಾನೂನು ಏನಿದೆಯೋ ಆ ವ್ಯಾಪ್ತಿಯಲ್ಲಿ ನಡೆಯಲಿ. ಏನೇನೂ ಕ್ರಮ ಕೈಗೊಳ್ಳಬೇಕೋ ಆ ಕ್ರಮ ಕೈಗೊಳ್ಳೊದು
ಸರ್ಕಾರದ ಜವಾಬ್ದಾರಿ ಅಂತ ಕುಮಾರಸ್ವಾಮಿ ಹೇಳಿದ್ದಾರೆ.
ಇದರಲ್ಲಿ ಅನೇಕ ಜನ ಇದ್ದಾರೆ. ನಾನು ಅವರ ಹೆಸರನ್ನು ಹೇಳಲು ಹೋಗಲ್ಲ. ಈ ವಿಚಾರದಲ್ಲಿ ಯಾರ್ಯಾರು ಇದ್ದಾರೆ? ಅವರೆಲ್ಲರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ನ್ಯಾಯ ಸಿಗಬೇಕು, ಯಾವ ಹೆಣ್ಮಕ್ಕಳು ಅಪಾಯಕ್ಕೆ ಸಿಕ್ಕಿದ್ದಾರೆ. ಅವರಿಗೆ ಪರಿಹಾರ ನೀಡಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ದೇವರಾಜೇಗೌಡ ಆರೋಪ ವಿಚಾರದಲ್ಲಿ ಮಾತನಾಡಿದ ಅವರು, ದೇವರಾಜೇಗೌಡರ ಹೇಳಿಕೆಯನ್ನ ಮಾಧ್ಯಮಗಳಲ್ಲಿ ನಾವು ನೋಡಿದ್ದೇವೆ. ದೇವರಾಜೇಗೌಡರ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ. ಎಲ್ಲ ವಿಚಾರದಲ್ಲೂ ಕುಮಾರಸ್ವಾಮಿಯವರು ರಿಯಾಕ್ಟ್ ಮಾಡುತ್ತಿದ್ದಾರೆ. ದೇವೇಗೌಡರ ಕುಟುಂಬಕ್ಕೆ ಹಿನ್ನಡೆ ಮಾಡಬೇಕೆಂಬ ಹುನ್ನಾರ ನಿಜ. ಇದ್ರಲ್ಲಿ ತುಂಬಾ ಜನ ಇದ್ದಾರೆ, ನಾನು ಅವ್ರ ಹೆಸರು ಹೇಳೋದಿಲ್ಲ. ಕುಮಾರಸ್ವಾಮಿ ಅವರು ಏನು ಮಾಡಬೇಕು ಅಂತ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.
ಇದನ್ನೂ ಓದಿ : ‘ಹೃದಯವಂತ’ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ನಿವೃತ್ತಿ..!