ಬೆಂಗಳೂರು : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಿ.ಪಿ.ಯೋಗೇಶ್ವರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ಯೋಗೇಶ್ವರ್, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ನಿಂದ ಕಣಕ್ಕಿಳಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಆದರೆ ನವೆಂಬರ್ 13ರಂದು ನಡೆಯುವ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು? ಎಂಬುದು ಸದ್ಯದ ಯಕ್ಷ ಪ್ರಶ್ನೆಯಾಗಿದೆ.
ಚನ್ನಪಟ್ಟಣದಲ್ಲಿ ಸೈನಿಕ ಎಂದೆಲ್ಲ ಕರೆಸಿಕೊಳ್ಳುವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣ ಗೆಲ್ಲಲೇಬೇಕು ಎಂದು ಪಣತೊಟ್ಟಿದ್ದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗೆಲುವಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.
ಇದೀಗ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿ. ಪಿ. ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಜೆಡಿಎಸ್ನಿಂದ ನಾಲ್ಕು ಹೆಸರುಗಳು ಕೇಳಿ ಬರ್ತಿವೆ. ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅನುಸೂಯ ಮಂಜುನಾಥ್ ಮತ್ತು ಜಯಮುತ್ತು ಹೆಸರು ಚರ್ಚೆಯಲ್ಲಿವೆ.
ಯೋಗೇಶ್ವರ್ಗೆ ಪ್ರಬಲ ಎದುರಾಳಿ ಹುಡುಕ್ತಿರೋ ದಳಪತಿ, ನಿಖಿಲ್ ಅಭ್ಯರ್ಥಿ ಮಾಡೋದು ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿ ನಾಯಕರ ಜೊತೆಯೂ ಚರ್ಚೆ ಮಾಡಿರೋ ದಳಪತಿ, ಇಂದು ಸಂಜೆ ಚನ್ನಪಟ್ಟಣ ಮುಖಂಡರ ಜೊತೆ ಮತ್ತೊಂದು ಸಭೆ ಮಾಡಲಿದ್ದಾರೆ.
ಇದನ್ನೂ ಓದಿ : JDS ಸೇರಿದ ನಂತರ ಬಿಜೆಪಿ ವಾತಾವರಣ ಕೆಟ್ಟಿದೆ – ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ..!