ದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರಿನ ಹರ್ಷ ಶೋರೂಮ್ ಗೋದಾಮಿಗೆ ಏಕಾಏಕಿ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ. ಸಂತೃಪ್ತಿ ಹೋಟೆಲ್ ಹಿಂಭಾಗ ಹರ್ಷ ಶೋರೂಮ್ ಗೋದಾಮ್ನಲ್ಲಿ ವಿವಿಧ ವಸ್ತುಗಳನ್ನು ಇಡಲಾಗಿತ್ತು. ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ.
ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದು, ಅವರಿಗೆ ಪುತ್ತೂರು ನಗರ ಪೊಲೀಸರು ಸಾಥ್ ನೀಡಿದ್ದಾರೆ, ಇನ್ನು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬೆಂಕಿ ಹತ್ತಿಕೊಳ್ಳಲು ಕಾರಣವೇನೆಂಬುದು ಇನ್ನಷ್ಟೇ ತನಿಖೆಯಿಂದ ತಿಳಿಯಬೇಕಿದೆ.
ಇದನ್ನೂ ಓದಿ : ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಲಕ್ನೋ ರೋಚಕ ಕದನ – ಪಂದ್ಯ ಎಷ್ಟು ಗಂಟೆಗೆ ಆರಂಭ
Post Views: 166