Download Our App

Follow us

Home » ಜಿಲ್ಲೆ » ಗಣಿ ನಾಡು ಬಳ್ಳಾರಿಯಲ್ಲಿ ಭಾರೀ ಮಳೆ – ನೂರಾರು ಮೈನ್ಸ್ ಲಾರಿಗಳು ಜಲಾವೃತ..!

ಗಣಿ ನಾಡು ಬಳ್ಳಾರಿಯಲ್ಲಿ ಭಾರೀ ಮಳೆ – ನೂರಾರು ಮೈನ್ಸ್ ಲಾರಿಗಳು ಜಲಾವೃತ..!

ಬಳ್ಳಾರಿ : ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು, ಮಳೆ ಆರ್ಭಟಕ್ಕೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ. ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆಯಾಗಿದೆ.

ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಇಡೀ ರಾತ್ರಿ ಡ್ರೈವರ್​ಗಳು ಪರದಾಡಿದ್ದು, ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಮಳೆ ಅವಾಂತರ ಕಂಡು ಲಾರಿ ಡ್ರೈವರ್​ಗಳು ನಲುಗಿ ಹೋಗಿದ್ದಾರೆ. ಕುಮಾರಸ್ವಾಮಿ ಬೆಟ್ಟದಲ್ಲಿ ಸುರಿದ ಮಳೆಯಿಂದ ಈ ಅವಾಂತರ ಸೃಷ್ಟಿಯಾಗಿದೆ.

ತಡ ರಾತ್ರಿ ಮೈನ್ಸ್ ಲೋಡ್​ಗೆಂದು ಲಾರಿಗಳು ಹೋಗಿದ್ದವು. ಈ ವೇಳೆ ಸ್ವಾಮಿ ಮಲೈ, ದೋಣಿ ಮಲೈ, ಕುಮಾರಸ್ವಾಮಿ ಬೆಟ್ಟದಲ್ಲಿ ಭಾರೀ ಮಳೆಯಾಗಿದೆ. ಹಾಗಾಗಿ ಮೈನ್ಸ್ ಲೋಡಿಂಗ್​ಗೆ ತೆರಳಿದ್ದ ಲಾರಿಗಳು ಇಡೀ ರಾತ್ರಿ ಪರದಾಟ ನಡೆಸುವಂತಾಗಿತ್ತು. ಬೆಳಗ್ಗೆ ನೀರು ಕಡಿಮೆಯಾದ್ಮೇಲೆ ಲಾರಿಗಳು ಹೊರಬಂದಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಬಿಗ್​ಬಾಸ್​ ಮನೆಯಲ್ಲಿ ಕಿಚ್ಚನ ಮೊದಲ ಪಂಚಾಯ್ತಿ.. ಎಲಿಮಿನೇಟ್ ಆಗೋದ್ಯಾರು?

 

Leave a Comment

DG Ad

RELATED LATEST NEWS

Top Headlines

ಅಶೋಕ್​ ರಾಜೀನಾಮೆ ಕೊಡಲಿ, ತಪ್ಪು ಮಾಡದ ನನ್ನಿಂದ ರಾಜೀನಾಮೆ ಯಾಕ್ ಕೇಳ್ತಾರೆ – ಸಿಎಂ ಸಿದ್ದು..!

ರಾಯಚೂರು : ನಾನು ತಪ್ಪು ಮಾಡಿದ್ದೀನಿ ಅಂತಾ ಕೋರ್ಟ್​ ಹೇಳಿದೆಯಾ..? ತಪ್ಪು ಮಾಡದೇ ನಾನ್ಯಾಕೆ ರಾಜೀನಾಮೆ ಕೊಡಲಿ, ಅಶೋಕ್​ ಮೊದಲು ರಾಜೀನಾಮೆ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ

Live Cricket

Add Your Heading Text Here