ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೆ ಮಳೆ ಅಬ್ಬರಿಸಿದೆ. ನಿನ್ನೆ (ಮೇ13) ಸಂಜೆವರೆಗೆ ಸಾಮಾನ್ಯವಾಗಿದ್ದ ಬೆಂಗಳೂರಿನ ವಾತಾವರಣ ರಾತ್ರಿ ಸಂಪೂರ್ಣ ಬದಲಾಗಿದೆ. ಕಾರ್ಪೋರೇಷನ್, ಸಂಜಯನಗರ, ಮೆಜೆಸ್ಟಿಕ್, ಲಾಲ್ಬಾಗ್ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ವಿಜಯ ನಗರ, ಯಶವಂತಪುರ, ರಾಜಾಜಿನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರಿಸಿದೆ.
ಭಾರೀ ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಮುಂದಿನ ಮೂರು ದಿನ ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಿಜಾಪುರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇನ್ನೂ 3 ದಿನ ಮಳೆ ಎಚ್ಚರಿಕೆ – ಇನ್ನೂ 3 ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾರ್ಭಟದ ಮುನ್ಸೂಚನೆ ಹವಮಾನ ಇಲಾಖೆ ನೀಡಿದೆ.
ಮನೆಗಳಿಗೆ ನುಗ್ಗಿದ ನೀರು, ಜನರ ಪರದಾಟ : ಕಳೆದ ಮೂರು ದಿನಗಳಿಂದ ನಿರಂತರವಾಗಿ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮಳೆಯಾಗುತ್ತಿದೆ. ಇನ್ನು ಇಂದಿನ ಮಳೆಗೆ ಮಡಿವಾಳದಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನರು ಪರದಾಡುವಂತಾಯ್ತು.
ಇದನ್ನೂ ಓದಿ : ರ್ಯಾಪರ್ ಚಂದನ್ ಶೆಟ್ಟಿ ನಟನೆಯ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ” ಸಿನಿಮಾದ ಟ್ರೈಲರ್ ರಿಲೀಸ್..!