Download Our App

Follow us

Home » ರಾಜ್ಯ » ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ – ಈವರೆಗೂ 40ಕ್ಕೂ ಹೆಚ್ಚು ಮಂದಿ ಸಾ*ವು..!

ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ – ಈವರೆಗೂ 40ಕ್ಕೂ ಹೆಚ್ಚು ಮಂದಿ ಸಾ*ವು..!

ಆಂಧ್ರಪ್ರದೇಶ : ಆಂಧ್ರಪ್ರದೇಶದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮಳೆಯ ಹೊಡೆತಕ್ಕೆ ಈವರೆಗೂ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 5 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.

6 ಲಕ್ಷ ಹೆಕ್ಟೇರ್​​​ನಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ವಿಜಯವಾಡ, ಪ್ರಕಾಶಂ, ಕಮ್ಮಂ ಸೇರಿದಂತೆ ಹಲವು ಕಡೆ ಭಾರೀ ಅನಾಹುತ ಸಂಭವಿಸಿದೆ. ಕೃಷ್ಣ, ಗೋದಾವರಿ ಸೇರಿ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆಯ ಅಬ್ಬರ ಹೆಚ್ಚಾಗಿದೆ.

1991ರ ನಂತರ ವಿಜಯವಾಡ ಭಾಗದಲ್ಲಿ ದಾಖಲೆಯ ಮಳೆ ಸುರಿದಿದೆ. ಖುದ್ದು ಸಿಎಂ ಚಂದ್ರಬಾಬು ನಾಯ್ಡು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ. ಇನ್ನು ಮಳೆಹಾನಿಯಿಂದಾಗಿ ಸುಮಾರು 400ಕ್ಕೂ ಹೆಚ್ಚು ರೈಲುಗಳ ಸಂಚಾರ ಅಸ್ತವ್ಯಸ್ತವಾಗಿದೆ. 100 ರೈಲುಗಳನ್ನು ಸಂಪೂರ್ಣ ರದ್ದು ಮಾಡಲಾಗಿದೆ.

ಇದನ್ನೂ ಓದಿ : ‘ಮೆಜೆಸ್ಟಿಕ್-2’ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ – ಬಹುವರ್ಷಗಳ ಬಳಿಕ ಭರ್ಜರಿಯಾಗಿ ಸ್ಟೆಪ್ ಹಾಕಿದ ಆ್ಯಕ್ಷನ್ ಕ್ವೀನ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here