Download Our App

Follow us

Home » ಜಿಲ್ಲೆ » ರಾಯಚೂರಿನಲ್ಲಿ ಸ್ಕೂಲ್ ​ಬಸ್​-KSRTC ಬಸ್ ಮಧ್ಯೆ ಭೀಕರ ಅಪಘಾತ – ಇಬ್ಬರು ಮಕ್ಕಳು ದುರ್ಮರಣ..!

ರಾಯಚೂರಿನಲ್ಲಿ ಸ್ಕೂಲ್ ​ಬಸ್​-KSRTC ಬಸ್ ಮಧ್ಯೆ ಭೀಕರ ಅಪಘಾತ – ಇಬ್ಬರು ಮಕ್ಕಳು ದುರ್ಮರಣ..!

ರಾಯಚೂರು : ಮಾನ್ವಿ ಪಟ್ಟಣದಲ್ಲಿ ಸ್ಕೂಲ್ ​ಬಸ್ ಮತ್ತು KSRTC ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಮಾನ್ವಿ ತಾಲೂಕಿನ ಕಪಗಲ್‌ ಹಳ್ಳದ ಬಳಿ ಈ ಘಟನೆ ನಡೆದಿದೆ.

ಮಾನ್ವಿ ಪಟ್ಟಣದ ಲೋಯೋಲಾ ಶಿಕ್ಷಣ ಸಂಸ್ಥೆಗೆ ಸೇರಿದ ಸ್ಕೂಲ್ ​ಬಸ್ ಇದಾಗಿದ್ದು, ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಲ್ ​ಬಸ್​​ಗೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದು, ಮೃತರನ್ನು 1ನೇ ತರಗತಿಯ ಸಮಂತಾ, 7ನೇ ತರಗತಿಯ ಶ್ರೀಕಾಂತ್ ಎಂದು ಗುರುತಿಸಲಾಗಿದೆ.

ಇನ್ನು ಸ್ಕೂಲ್​ ಬಸ್​​ನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಸ್ಥಿತಿ ಕಂಡು ಪೋಷಕರ ಆಕ್ರಂದನ ಮುಗಿಲು ಮಟ್ಟಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕೊನೆಗೂ ರಿಟ್ರೀವ್​​ ಆಗಲೇ ಇಲ್ಲ ದರ್ಶನ್ ಫೋನ್​​ – ಹೈದರಾಬಾದ್ CFSLನಿಂದ ಮೊಬೈಲ್ ರಿಟರ್ನ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here