Download Our App

Follow us

Home » ಜಿಲ್ಲೆ » ಕಲಬುರಗಿಯಲ್ಲಿ ದಾರುಣ ಘಟನೆ : ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಮ್​ಗಾರ್ಡ್ ಸಿಬ್ಬಂದಿ ಸಾ*ವು..!

ಕಲಬುರಗಿಯಲ್ಲಿ ದಾರುಣ ಘಟನೆ : ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಮ್​ಗಾರ್ಡ್ ಸಿಬ್ಬಂದಿ ಸಾ*ವು..!

ಕಲಬುರಗಿ : ಶರಣಬಸವೇಶ್ವರ 202ನೇ ಜಾತ್ರಾ ಮಹೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಹೋಮ್​ ಗಾರ್ಡ್​ ಸಿಬ್ಬಂದಿ ಸಾವನ್ನಪಿರುವ ಘಟನೆ ನಡೆದಿದೆ. ನಿನ್ನೆಯಿಂದ ಆರಂಭವಾದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ 28 ವರ್ಷದ ರಾಮು ಸಿದ್ದಪ್ಪ ಎಂಬಾತ ಹೋಮ್​ಗಾರ್ಡ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉಚ್ಚಾಯಿ ತೇರು ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದೆ.

ಭಕ್ತರನ್ನ ನಿಯಂತ್ರಿಸುವ ವೇಳೆ ಹೋಮ್​ಗಾರ್ಡ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತ ರಾಮು ಸಿದ್ದಪ್ಪ ಬೀದರ್ ಜಿಲ್ಲೆ ಇಟಗಾ ಗ್ರಾಮದವರೆಂದು ತಿಳಿದುಬಂದಿದೆ. ಮತೋರ್ವ ಸಿಬ್ಬಂದಿ ಅಶೋಕ್ ರೆಡ್ಡಿಗೆ ಗಂಭೀರ ಗಾಯವಾಗಿರೊದ್ರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆ ಉಂಟಾದ ಗದ್ದಲದಿಂದ ಅನಾಹುತ ನಡೆದಿದೆ ಎನ್ನಲಾಗಿದೆ. ದುರ್ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ನಗರದ ಆರ್.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ..! –

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here