ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೇ.15 ರಂದು ಬೆಳಗಿನ ಜಾವ ನೇಹಾ ಮಾದರಿಯಲ್ಲಿಯೇ ನಗರದ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿ ಹತ್ಯೆಯಾಗಿತ್ತು. ಹಂತಕ ವಿಶ್ವನಾಥ ಸಾವಂತ ಅಲಿಯಾಸ್ ಗಿರೀಶ್ ಎಂಬಾತ ಆಟೋದಲ್ಲಿ ಬಂದು ಅಂಜಲಿ ಮನೆಗೆ ನುಗ್ಗಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ.
ಹಂತಕ ಆಟೋದಲ್ಲಿ ಬಂದಿರೋ ದ್ರಶ್ಯಗಳ ಜೊತೆಗೆ ಕೊಲೆ ಬಳಿಕ ಆತ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ ದೃಶ್ಯಗಳು ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಕಳೆದ 40 ಗಂಟೆಗಳ ಹಿಂದೆ ಕೊಲೆ ಮಾಡಿ ಪರಾರಿಯಾಗಿದ್ದ ವಿಶ್ವನಾಥ ಅಲಿಯಾಸ್ ಗಿರೀಶ್ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.
ಇದೀಗ, ಆರೋಪಿಯನ್ನ ಬಂಧಿಸುವಲ್ಲಿ ಹುಬ್ಬಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರ ಪ್ಲಾನ್ ವರ್ಕ್ಔಟ್ ಆಗಿದೆ. ಈ ಪ್ರಕರಣ ಸಂಬಂಧ ಎರಡು ತಂಡಗಳನ್ನ ರಚನೆ ಮಾಡಿದ್ದ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರು, ಪ್ರತಿಯೊಂದು ಪ್ರಮುಖ ಸಿಸಿಟಿವಿ ದೃಶ್ಯಗಳನ್ನ ಪರಿಶೀಲನೆ ಮಾಡಿ ಕೊನೆಗೆ ದಾವಣಗೆರೆಯಲ್ಲಿ ಆರೋಪಿ ಇರುವುದನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಇನ್ನು, ನಿನ್ನೆಯಿಂದ ಹುಬ್ಬಳ್ಳಿಯಲ್ಲಿ ಆರೋಪಿ ಎನ್ಕೌಂಟರ್ಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಕಳೆದ ಎರಡು ದಿನಗಳಿಂದ ಈ ಪ್ರಕರಣ ಸಂಬಂಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿವೆ.
ಇದನ್ನೂ ಓದಿ : ಹಾಸನ : ಮೀನು ಹಿಡಿಯಲು ಹೋದ ನಾಲ್ವರು ಬಾಲಕರು ನೀರುಪಾಲು..!