ಹುಬ್ಬಳ್ಳಿ : ಪಾಲಿಕೆ ಸದಸ್ಯನ ಕೊಲೆಗೆ ಯತ್ನಿಸಿ ನಾಪತ್ತೆಯಾಗಿದ್ದ ಆರೋಪಿ ಸೈಫ್ ಅಲಿ ಬಾಂಬೆಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
2016 ರಲ್ಲಿ ಹು-ಧಾ ಪಾಲಿಕೆ ಸದಸ್ಯ ಆರೀಪ್ ಭದ್ರಾಪೂರ ಹತ್ಯೆಗೆ ಯತ್ನಿಸಿದ ಆರೋಪಿ ಸೈಫ್ ಅಲಿ ಬಾಂಬೆಯನ್ನು ಪೊಲೀಸರು ಬಂಧಿಸಿದ್ದರು. ಆದರೆ 2016 ರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು, ಎಂಟು ವರ್ಷದಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡು ದೇಶಾದ್ಯಂತ ತಿರುಗುತ್ತಿದ್ದ.
ಅಲ್ಲದೇ ನಾಪತ್ತೆಯಾಗಿ ಪಕೀರ ವೇಷ ಧರಿಸಿ ದೇಶ ಸುತ್ತಿದ ಸೈಫ್ ಅಲಿ ಬಾಂಬೆಯನ್ನು ಹುಬ್ಬಳ್ಳಿ ಶಹರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ : ಫಾರಿನ್ನಿಂದ್ಲೇ ಜಾಮೀನು ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ..!
Post Views: 113