Download Our App

Follow us

Home » ಜಿಲ್ಲೆ » ಹುಬ್ಬಳ್ಳಿ : ಆನ್​ಲೈನ್​ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ..!

ಹುಬ್ಬಳ್ಳಿ : ಆನ್​ಲೈನ್​ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ..!

ಹುಬ್ಬಳ್ಳಿ : ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ. ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಫ್ಯಾನ್​ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ನಿತ್ಯ ಆನ್​ಲೈನ್​ ಗೇಮ್ ಆಡುತ್ತಿದ್ದನು ಎಂದು ಹೇಳಲಾಗುತ್ತಿದೆ. ಹೀಗಾಗಿ ಆನ್​ಲೈನ್ ಗೇಮ್​ನಲ್ಲಿ ಹಣವನ್ನು ಕಳೆದುಕೊಂಡಿದ್ದನು ಎನ್ನಲಾಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆನ್​ಲೈನ್ ಗೇಮ್​ಗೆ ಆತ ಅಡಿಕ್ಟ್​ ಆಗಿದ್ದ ಅನ್ನೋ ಮಾಹಿತಿ ಇದೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್​ – ಶುದ್ಧ ನೀರಿನ ಘಟಕಗಳಲ್ಲಿ 20 ಲೀಟರ್‌ ನೀರಿನ ದರ 10ಕ್ಕೆ ಏರಿಕೆ..!

Leave a Comment

DG Ad

RELATED LATEST NEWS

Top Headlines

ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಪ್ರಕರಣ – AE ವಿನಯ್​​ ಅಮಾನತು ಮಾಡಿ BBMP ಕಮಿಷನರ್​​ ಆದೇಶ..!

ಬೆಂಗಳೂರು : ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಕೇಸ್​​ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್​​ ಆದೇಶ ಹೊರಡಿಸಿದ್ದಾರೆ.

Live Cricket

Add Your Heading Text Here