Download Our App

Follow us

Home » Uncategorized » ಹುಬ್ಬಳ್ಳಿ : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು!

ಹುಬ್ಬಳ್ಳಿ : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು!

ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂಜಯ್ (58), ಅಜ್ಜಾಸ್ವಾಮಿ (18) ಮೃತಪಟ್ಟ ಮಾಲಾಧಾರಿಗಳು.

ಇವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಈ ನಡುವೆ, ಹೆಚ್ಚಿನ ಚಿಕಿತ್ಸೆ ಕೂಡಿಸಲು ಸಚಿವ ಸಂತೋಷ್ ಲಾಡ್ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ.

ಹುಬ್ಬಳ್ಳಿ ದುರಂತದ ಹಿನ್ನೆಲೆ : ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್​ ಸ್ಫೋಟಗೊಂಡಿತ್ತು. ಗ್ಯಾಸ್​ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ಅವರನ್ನೆಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ : Bossism ಕಾಲ ಮುಗೀತು.. MAXIMUM MAS ಕಾಲ ಶುರುವಾಯ್ತು – ದರ್ಶನ್​​ಗೆ ಗುಮ್ಮಿದ ಕಿಚ್ಚ ಸುದೀಪ್​​..!

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here