ಬೆಂಗಳೂರು : ಫ್ರಾಂಚೈಸಿ ಹೆಸರಲ್ಲಿ ಮೋಸ ಮಾಡಿದ ಆರೋಪದ ಮೇಲೆ ಇಡ್ಲಿಗುರು ಹೋಟೆಲ್ ಮಾಲೀಕನನ್ನು ಅರೆಸ್ಟ್ ಮಾಡಿದ್ದಾರೆ. ಇಡ್ಲಿಗುರು ಹೋಟೆಲ್ ಮಾಲೀಕ ಕಾರ್ತಿಕ್ ಶೆಟ್ಟಿ ಹಾಗೂ ಪತ್ನಿ ಮಂಜುಳಾ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಎಫ್ಐಆರ್ ದಾಖಲಾಗುತ್ತಿದ್ದಂತೆ ಕಾರ್ತಿಕ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಇಂದು ಕಾಮಾಕ್ಷಿಪಾಳ್ಯ ಪೊಲೀಸರು ಮುಂಬೈನಲ್ಲಿ ಆರೋಪಿಯನ್ನ ಬಂಧಿಸಿ ಕರೆತರುತ್ತಿದ್ದಾರೆ. ಫ್ರಾಂಚೈಸಿ ನೀಡುವುದಾಗಿ ನಂಬಿಸಿ ಚೇತನ್ ಎಂಬುವವರಿಗೆ ಕಾರ್ತಿಕ್ ಶೆಟ್ಟಿ ವಂಚಿಸಿದ್ದ.
ವಂಚನೆ ಸಂಬಂಧ ಇಡ್ಲಿಗುರು ಹೋಟೆಲ್ ಮಾಲೀಕ ಕಾರ್ತಿಕ್ ಶೆಟ್ಟಿ, ಅವರ ಪತ್ನಿ ಮಂಜುಳಾ, ತಂದೆ ಬಾಬು ಶೆಟ್ಟಿ ಹಾಗೂ ಹೋಟೆಲ್ ಸಿಬ್ಬಂದಿ ದಿವಾಕರ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳು ಚೇತನ್ ಅವರನ್ನ ನಂಬಿಸಿ ಮೂರು ಲಕ್ಷ ರೂ. ಪಡೆದಿದ್ದರು.
ಫುಡ್ ಕಾರ್ಟ್ ತಂದು ನಿಲ್ಲಿಸಿ ಸ್ವಲ್ಪ ದಿನಗಳ ಬಳಿಕ ವ್ಯಾಪಾರ ಆಗುತ್ತಿಲ್ಲ ಬೇರೆಡೆ ವ್ಯಾಪಾರ ಮಾಡೋಣ ಅಂತಾ ಶಿಫ್ಟ್ ಮಾಡಿದ್ರು, ನಂತರ ಕಮಿಷನ್ ನೀಡುವುದಾಗಿ ಹೇಳಿ ಯಾವುದೇ ಕಮಿಷನ್ ನೀಡದೆ ವಂಚನೆ ಮಾಡಿದ್ದಾರೆ. ಅಂಗಡಿಗಾಗಿ ಖರ್ಚಾದ ಹಣವನ್ನೂ ನೀಡದೆ ಮೋಸ ಮಾಡಿದ್ದು, ಚೇತನ್ ಆರೋಪಿಗಳನ್ನ ಭೇಟಿಯಾಗಿ ವಿಚಾರಿಸಿದಾಗ ಜೀವ ಬೆದರಿಕೆ ಹಾಕಿದ್ದರು.
ಇದನ್ನೂ ಓದಿ : ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ : ಓರ್ವ ಸಾ*ವು, ಮೂವರಿಗೆ ಗಂಭೀರ ಗಾಯ..!