Download Our App

Follow us

Home » ಜಿಲ್ಲೆ » ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ : ಮಂಗಳೂರು ನಗರದಾದ್ಯಂತ ಪೊಲೀಸರ ಕಟ್ಟೆಚ್ಚರ..!

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ : ಮಂಗಳೂರು ನಗರದಾದ್ಯಂತ ಪೊಲೀಸರ ಕಟ್ಟೆಚ್ಚರ..!

ಮಂಗಳೂರು : ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ಬಂದ್​ಗೆ ಪ್ರಸ್ತಾವನೆ ಸಲ್ಲಿಸಿದ್ದು, ಫ್ಲೆಕ್ಸ್ ಬಂಟಿಂಗ್ಸ್​ಗಳ ಮೇಲೆ ನಿಗಾ ಇಡಲು ಪಾಲಿಕೆಗೆ ಸೂಚನೆ ನೀಡಿದ್ದಾರೆ.

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ‌ ಕರಾವಳಿಯಾದ್ಯಂತ ರಾಮಮಂದಿರ ಉದ್ಘಾಟನೆ ಸಂಭ್ರಮ ಜೋರಾಗಿದೆ. ಅಲ್ಲಲ್ಲಿ ಕೇಸರಿ ಧ್ವಜ, ರಾಮನ ಫ್ಲೆಕ್ಸ್ ಹಾಕಿ ಭಕ್ತರು ಸಂಭ್ರಮಿಸುತ್ತಿದ್ದಾರೆ. ಪೊಲೀಸರು ಭದ್ರತಾ ತಪಾಸಣೆ ಆರಂಭಿಸಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

196 ಕಡೆ ಧಾರ್ಮಿಕ ಕಾರ್ಯಕ್ರಮ ಸ್ಥಳ ಗುರುತು ಮಾಡಲಾಗಿದ್ದು 131 ಸೂಕ್ಷ್ಮ ಪ್ರದೇಶ ಗುರುತಿಸಲಾಗಿದೆ. ಈ ಪ್ರದೇಶದ ಮೇಲೆ ಹೆಚ್ಚಿನ ಗಮನ ಇಡಲಾಗಿದೆ. 57 ಸೆಕ್ಟರ್ ಮೊಬೈಲ್ ಸ್ವ್ಕಾಡ್ ಹಗಲು ರಾತ್ರಿ ಗಸ್ತು ಮಾಡಲಿದೆ. 14 ಚಕ್ ಪಾಯಿಂಟ್ ನಿಯೋಜಿಸಲಾಗಿದೆ.

9 ಸಿಎಆರ್, 3 ಕೆಎಸ್ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಮಂಗಳೂರಿನ ಎಲ್ಲಾ ಕಡೆ ವಿದ್ವಂಸಕ ತಪಾಸಣಾ ತಂಡದಿಂದ ತಪಾಸಣೆ ಮಾಡಲಾಗುತ್ತಿದೆ. ಮೆರವಣಿಗೆ, ರ್ಯಾಲಿಗಳಿಗೆ ಅವಕಾಶ ಇಲ್ಲ. 3 ಡಿಸಿಪಿ, 6 ಎಸಿಪಿ, 11 ಪಿಐ, 37 ಪಿಎಸ್ಐ ಹಾಗೂ 781 ಪೊಲೀಸ್ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ : ಮೈಸೂರಿನಲ್ಲಿ ಶ್ರೀರಾಮನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here