Download Our App

Follow us

Home » ಮೆಟ್ರೋ » ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ – ಕಮಿಷನರ್​​​ ಬಿ.ದಯಾನಂದ್..!

ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ – ಕಮಿಷನರ್​​​ ಬಿ.ದಯಾನಂದ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಇಂದು ಸಲ್ಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದಾರೆ.

ಚಾರ್ಜ್​​ಶೀಟ್​ ಸಲ್ಲಿಕೆ ನಂತರ  ಮಾತನಾಡಿದ ಕಮಿಷನರ್​​​ ಬಿ.ದಯಾನಂದ್ ಅವರು, ರೇಣುಕಾಸ್ವಾಮಿ ಕೇಸ್​ನಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗಿದೆ. ಕೋರ್ಟ್​ನಲ್ಲಿ ತ್ವರಿತ ಗತಿಯ ವಿಚಾರಣೆ ಮಾಡಲು ಮನವಿ ಮಾಡ್ತೇವೆ ಎಂದಿದ್ದಾರೆ.

ಸರ್ಕಾರಿ ಅಧಿಕಾರಿಗಳನ್ನೂ ಸಾಕ್ಷಿಗಳನ್ನಾಗಿ ಮಾಡಿಕೊಳ್ಳಲಾಗಿದೆ. ಒಟ್ಟು 231 ಸಾಕ್ಷಿದಾರರನ್ನ ಉಲ್ಲೇಖ ಮಾಡಲಾಗಿದೆ. ಬೆಂಗಳೂರಿನ FSLನಿಂದ ಎಲ್ಲಾ ವರದಿ ಬಂದಿವೆ. ಹೈದ್ರಾಬಾದ್​ CFSLನಲ್ಲಿ ಎಲೆಕ್ಟ್ರಾನಿಕ್ ಡಿವೈಸ್​ಗಳ ವರದಿ ಬಂದಿದೆ. ಇನ್ನೂ ಒಂದಷ್ಟು ವರದಿ ಬರುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.

ಇನ್ನು ದರ್ಶನ್ ಮತ್ತವರ ತಂಡದ ವಿರುದ್ಧ ಸಾಕಷ್ಟು ತಾಂತ್ರಿಕ ಸಾಕ್ಷಿ ಸಿಕ್ಕಿವೆ. 17 ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದೇವೆ. 3991 ಪುಟಗಳ ಮಾಹಿತಿಯನ್ನು ಚಾರ್ಜ್ ಶೀಟ್ ಒಳಗೊಂಡಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ತೆರೆಗೆ ಬರಲು ಸಜ್ಜಾದ ‘ಭಗೀರಥ’ – ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here