Download Our App

Follow us

Home » ಜಿಲ್ಲೆ » ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ರೇಡ್..!

ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ರೇಡ್..!

ಬೀದರ್ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಅಮರ್​​ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪೊಲೀಸರ ತಂಡದೊಂದಿಗೆ ಆಗಮಿಸಿ ಬ್ಯಾಂಕ್​ಗೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಧಿಕಾರಿಗಳ ತಂಡ ಬ್ಯಾಂಕ್ ಪ್ರವೇಶಿಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೀದರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ ಸುಮಾರು 15 ರಿಂದ 20 ಜನ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ. ಬಿಜಾಪುರ ಹಾಗೂ ಕಲಬುರಗಿ ರಾಯಚೂರಿನಿಂದ ಬಂದಿರುವ ಐಟಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡಿದ್ದಾರೆ.

ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ್ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ನ ಎಲ್ಲ​ ಸಿಬ್ಬಂದಿಯ ಮೊಬೈಲ್​ಗಳನ್ನು ಸ್ವಿಚ್ ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲಿಸಿದ್ದಾರೆ. ಡಿಸಿಸಿ ಬ್ಯಾಂಕ್​​ನ ಜನರಲ್​​ ಮ್ಯಾನೇಜರ್​ ಸೇರಿ ಹಲವರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ.

ಇದನ್ನೂ ಓದಿ : ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಮನೆ ದೋಚಿದ್ದ ನಾಲ್ವರು ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here