Download Our App

Follow us

Home » ಜಿಲ್ಲೆ » ಜೈ ಶ್ರೀರಾಮ್​​​​ ಘೋಷಣೆ ಕೂಗಿದ ವಿಚಾರ : ಕಲಬುರಗಿಯಲ್ಲಿ ಕಾಂಗ್ರೆಸ್​ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ..!

ಜೈ ಶ್ರೀರಾಮ್​​​​ ಘೋಷಣೆ ಕೂಗಿದ ವಿಚಾರ : ಕಲಬುರಗಿಯಲ್ಲಿ ಕಾಂಗ್ರೆಸ್​ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ..!

ಕಲಬುರಗಿ : ಜೈ ಶ್ರೀರಾಮ್​​​​ ಎಂದು ಘೋಷಣೆ ಕೂಗಿದ ವಿಚಾರಕ್ಕೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಬಡದಾಳ ಗ್ರಾಮದಲ್ಲಿ‌ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರು ಕಚ್ಚಾಡಿದ್ದಾರೆ.

ಅಫಜಲಪುರ ಕಾಂಗ್ರೆಸ್​ ಶಾಸಕ‌ ಎಂ.ವೈ.ಪಾಟೀಲ್ ಎದುರೇ ಮಾತಿನ ಚಕಮಕಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗಾಗಿ ಬಡದಾಳ ಗ್ರಾಮಕ್ಕೆ ಶಾಸಕ ಪಾಟೀಲ್​ ಬಂದಿದ್ದರು. ಈ ವೇಳೆ ಗ್ರಾಮದ ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಎಂದು ಕೆಲ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದರು.

ಈ ವೇಳೆ ಜೈ ಶ್ರೀರಾಮ್​​​ ಅಂತಾ ಘೋಷಣೆ ಹಾಕಿದ್ರು. ಇದರಿಂದ ಸಿಟ್ಟಾದ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿ ಘೋಷಣೆ ಹಾಕಲು ಮುಂದಾಗಿದ್ದಾರೆ. ಇದ್ರಿಂದಾಗಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಸ್ಥಳೀಯರು ಎರಡೂ ಕಡೆಯವರನ್ನು ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ 3 ಎಕರೆ ಅರಣ್ಯ ಪ್ರದೇಶದಲ್ಲಿ ಬೆಂಕಿ : ಲಕ್ಷಾಂತರ ಮೌಲ್ಯದ ಮರಗಳು ಸುಟ್ಟು ಭಸ್ಮ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here