ಬೆಂಗಳೂರು : ಲೋಕಸಭೆ ಚುನಾವಣೆಗೆ ಮೂರು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧಿಸುವುದು ಇದೀಗ ಫಿಕ್ಸ್ ಆಗಿದೆ. ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದ್ದು, ಈ ಮೂರು ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಡಿಸೈಡ್ ಮಾಡಿದ್ದಾರೆ.
ಇಂದು ನಡೆಯುವ ಸಭೆಯಲ್ಲಿ ಅಂತಿಮವಾಗಿ ನಿರ್ಧಾರ ಮಾಡುವ ಸಾಧ್ಯತೆಯಿದೆ. ದಳಪತಿಗಳು ಮತ್ತೊಂದು ಕ್ಷೇತ್ರ ಬಿಟ್ಟುಕೊಡಲು ಕೇಳ್ತಿದ್ದು, ಹೀಗಾಗಿ ಮೂರು ಕ್ಷೇತ್ರದಲ್ಲೂ ಗೆಲ್ಲಲು ದಳಪತಿಗಳು ಪ್ಲಾನ್ ಮಾಡುತ್ತಿದ್ದಾರೆ.
ಇದೇ ತಿಂಗಳು ಬೃಹತ್ ಸಮಾವೇಶ ಆಯೋಜಿಸಲು ಚಿಂತನೆ ನಡೆಸಿದ್ದು, ಮಂಡ್ಯ ಮತ್ತು ಕೋಲಾರದಲ್ಲಿ ಸಮಾವೇಶ ನಡೆಸೋ ರಣತಂತ್ರ ರೂಪಿಸಿದ್ದಾರೆ. ಈ ವಾರದಲ್ಲೇ HDK ಜೊತೆ ಮತ್ತೆ ಚರ್ಚಿಸಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಗೆಯೇ ಮತ್ತೊಂದೆಡೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ನಿವಾಸದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ಚರ್ಚೆ ನಡೆಸಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರ ಸಭೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರ ನಿವಾಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆದಿದೆ. ಹೆಚ್ಡಿಕೆ ನೇತೃತ್ವದಲ್ಲಿ ಮಹತ್ವದ ಮೀಟಿಂಗ್ ನಡೆದಿದ್ದು, ಬಿಜೆಪಿ ಮಾಜಿ ಸಚಿವ ಸಿಪಿ ಯೋಗೇಶ್ವರ್, ಶಾಸಕರಾದ ಮುನಿರತ್ನ, ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಬಿಜೆಪಿ ಜೆಡಿಎಸ್ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.
ಈ ಬಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಮೈತ್ರಿ ಪಕ್ಷಗಳು ತಂತ್ರ ನಡೆಸುತ್ತಿದೆ. ನಾಯಕರು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಚರ್ಚೆ ನಡೆದಿದ್ದು, ಸಿ.ಪಿ.ಯೋಗೇಶ್ವರ್ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಜೆಡಿಎಸ್ಗೆ ಟಿಕೆಟ್ ಕೊಡದೇ ಇದ್ರೆ ನನಗೆ ಸಹಕರಿಸಿ ಎಂದು ಯೋಗೇಶ್ವರ್ ಹೇಳುತ್ತಿದ್ದಾರೆ.
ಇದನ್ನೂ ಓದಿ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!