ಬೆಂಗಳೂರು : ಜೆಟ್ಲ್ಯಾಗ್ ಪಬ್ ನಲ್ಲಿ ತಡರಾತ್ರಿವರೆಗೂ ಪಾರ್ಟಿ ಮಾಡಿದ್ದಾರೆ ಎನ್ನುವ ಆರೋಪ ಹೊತ್ತಿರುವ ನಟ ದರ್ಶನ್ ಇಂದು ಪೊಲೀಸ್ ವಿಚಾರಣೆಗಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯತ್ತ ಹೊರಟಿದ್ದಾರೆ.
ಈಗಾಗಲೇ ದರ್ಶನ್ ಅಂಡ್ ಟೀಮ್ ಮನೆಯಿಂದ ಸ್ಟೇಶನ್ ನತ್ತ ಹೊರಟಿದ್ದು, ಜೆಟ್ಲ್ಯಾಗ್ ಪಬ್ ನಲ್ಲಿ ತಡರಾತ್ರಿವರೆಗೂ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಇತರ ನಟರಿಗೆ ಪೊಲೀಸರು ನೋಟಿಸ್ ನೀಡಿದ್ದರು.
ದುಬೈ ಪ್ರವಾಸದ ನಿಮಿತ್ತ ವಿಚಾರಣೆಗೆ ದರ್ಶನ್ ಹಾಜರಾಗಿರಲಿಲ್ಲ. ಪಾರ್ಟಿಯಲ್ಲಿ ಭಾಗವಹಿಸಿದ ಚಿತ್ರತಂಡ ಹಾಗೂ ಇತರ ನಟರು ವಿಚಾರಣೆಗಾಗಿ ಇಂದು ಸ್ಟೇಶನ್ ಗೆ ಹೋಗಲಿದ್ದಾರೆ.
ನಿಯಮ ಬಾಹಿರವಾಗಿ ಪಬ್ ನಲ್ಲಿ ಪಾರ್ಟಿ ನಡೆಸಿರೋ ಆರೋಪ ಹೊತ್ತಿರುವ ನೀನಾಸಂ ಸತೀಶ್, ಡಾಲಿ ಧನಂಜಯ, ಅಭಿಷೇಕ್ ಅಂಬರೀಶ್, ಚಿಕ್ಕಣ್ಣ ಕೂಡ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. ಪೊಲೀಸ್ ಠಾಣೆ ಮುಂದೆ ಅಭಿಮಾನಿಗಳು ಸೇರಿದ್ದು, ದರ್ಶನ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ಆಗಮಿಸಿದ್ದಾರೆ. ಸ್ಟೇಷನ್ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಇದನ್ನೂ ಓದಿ : ಅಯೋಧ್ಯಾ ರಾಮನಿಗಾಗಿ 11 ದಿನಗಳ ಉಪವಾಸ ವ್ರತಾಚರಣೆ ಆರಂಭಿಸಿದ ಮೋದಿ..!