ಉಡುಪಿ : ಉಡುಪಿ ಶ್ರೀ ಕೃಷ್ಣಮಠಕ್ಕೆ ತೆಲುಗು ಸೂಪರ್ ಸ್ಟಾರ್ ಜೂನಿಯರ್ NTR ಭೇಟಿ ನೀಡಿದ್ದಾರೆ. ಬಳಿಕ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದಿದ್ದಾರೆ.
ಉಡುಪಿಗೆ ಬಂದ ಜೂನಿಯರ್ ಎನ್ಟಿಆರ್ ಅವರಿಗೆ ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಸಾಥ್ ನೀಡಿದ್ರು. ಕುಟುಂಬ ಸಹಿತ ಬಂದು ದೇವರ ದರ್ಶನ ಮಾಡಿದ ಜೂನಿಯರ್ NTR ವಿಶೇಷ ಪೂಜೆ ಸಲ್ಲಿಸಿದ್ರು. ಶ್ರಾವಣ ಮಾಸದ ಶನಿವಾರದಂದು ದೇವರ ದರ್ಶನಕ್ಕೆ ದಿಗ್ಗಜ ನಟರು ಬಂದಿದ್ದು ವಿಶೇಷವಾಗಿತ್ತು.
ಜೂನಿಯರ್ ಎನ್ ಟಿ ಆರ್ ದೇವರ ಸಿನಿಮಾ ಬಳಿ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡ್ತಿದ್ದಾರೆ. ಸಿನಿಮಾ ಶೂಟಿಂಗ್ ಕೂಡ ಶುರುವಾಗಿದ್ದು, ಇದೀಗ ನಿರ್ದೇಶಕ ಪ್ರಶಾಂತ್ ಜೊತೆ ಉಡುಪಿಯಲ್ಲಿ ದೇವರ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ : ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ..!
Post Views: 259