Download Our App

Follow us

Home » ಅಪರಾಧ » ಫೋಕ್ಸೋ ಪ್ರಕರಣ : ಮೇ.27 ರವರೆಗೆ ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ..!

ಫೋಕ್ಸೋ ಪ್ರಕರಣ : ಮೇ.27 ರವರೆಗೆ ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ..!

ಚಿತ್ರದುರ್ಗ : ಫೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾಶ್ರೀ ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾಗಿದ್ದರು. ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಕಳೆದ ಮಂಗಳವಾರ ರದ್ದು ಮಾಡಿತ್ತು ಮತ್ತು ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಶರಣಾಗಿದ್ದಾರೆ. ಮೇ 27ಕ್ಕೆ ವಿಚಾರಣೆ ನಿಗದಿಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್​ ಆದೇಶದಂತೆ ಮುರುಘಾಶ್ರೀ ಮತ್ತೆ ಜೈಲು ಪಾಲಾಗಿದ್ದಾರೆ.

ಮುರುಘಾ ಶ್ರೀಗಳಿಗೆ ಮೇ.27ರವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದೆ. ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶಂಕರಪ್ಪ ನಿಂಬಣ್ಣ ಕಲ್ಕಣಿ ಅವರು ಮೇ. 27ರಿಂದ ಪ್ರಕರಣ ವಿಚಾರಣೆಗೆ ದಿನಾಂಕ ನಿಗದಿ ಮಾಡಿ ಆದೇಶ ನೀಡಿದ್ದಾರೆ. ಚಿತ್ರದುರ್ಗ DYSP ದಿನಕರ್ ನೇತೃದಲ್ಲಿ ಮೆಡಿಕಲ್ ಟೆಸ್ಟ್​ ನಡೆದಿದ್ದು, ಮೆಡಿಕಲ್ ಟೆಸ್ಟ್ ಬಳಿಕ ಪೋಕ್ಸೋ ಕೇಸ್​​​ನಲ್ಲಿ A1 ಆಗಿರೋ ಮುರುಘಾಶ್ರೀ ಮತ್ತೆ ಜೈಲು ಪಾಲಾಗಿದ್ದಾರೆ.

ಇದನ್ನೂ ಓದಿ : ನನ್ನ ವಿರುದ್ಧ ದೊಡ್ಡ ಷಢ್ಯಂತ್ರ ನಡೆದಿದೆ, ಇಂಥಾದ್ದಕ್ಕೆಲ್ಲಾ ನಾನು ಹೆದರಿ ಓಡಿ ಹೋಗಲ್ಲ : ಹೆಚ್​.ಡಿ ರೇವಣ್ಣ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here