Download Our App

Follow us

Home » ಸಿನಿಮಾ » ‘ಕಡಲೂರ ಕಣ್ಮಣಿ’ ಸಿನಿಮಾ ರಿಲೀಸ್​ಗೆ ರೆಡಿ..!

‘ಕಡಲೂರ ಕಣ್ಮಣಿ’ ಸಿನಿಮಾ ರಿಲೀಸ್​ಗೆ ರೆಡಿ..!

ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ ಅವರ ಸಹ ನಿರ್ಮಾಣವಿದೆ.

ನಾಯಕನಾಗಿ ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ “ಕಡಲೂರ ಕಣ್ಮಣಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಿಶಾ ಯಾಲಿನಿ ನಾಯಕಿಯಾಗಿ ನಟಿಸಿದ್ದು. ಅಂಜು ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಡುಪಿ, ಮಂಗಳೂರು ಹೊನ್ನಾವರ, ಮಂಕಿ, ಮುರುಡೇಶ್ವರದ ಸುತ್ತಮುತ್ತಲ್ಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ‌. ಈ ಮನಮೋಹಕ ಪ್ರಾಕೃತಿಕ ಸ್ಥಳಗಳನ್ನು ಮನೋಹರ್, ರವಿರಾಮ್ ಸುಂದರವಾಗಿ ಚಿತ್ರೀಕರಿಸಿದ್ದಾರೆ. ‘ಕಡಲೂರ ಕಣ್ಮಣಿ’ ಚಿತ್ರಕ್ಕೆ ನಿರ್ದೇಶಕರಾದ ರಾಮ್ ಪ್ರಸಾದ್ ಅವರು ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

‘ಕಡಲೂರ ಕಣ್ಮಣಿ’ ಅಂದರೆ ವಜ್ರ ಎಂದು ಅರ್ಥ. ಚಿತ್ರಕಥೆ ಯುವ ಮನಸುಗಳ ಪ್ರೀತಿ ಪ್ರೇಮದ ಮೇಲೆ ಸಾಗುತ್ತದೆ. ಸಿಟಿಯ ಹುಡುಗ ಕಡಲ ತೀರದ ಹುಡುಗಿಯ ಪ್ರೇಮ ಕಥೆಯೇ ‘ಕಡಲೂರ ಕಣ್ಮಣಿ’. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರದ ಕಲಾವಿದರು ತುಂಬಾ ಸುಂದರವಾಗಿ ನಟಿಸಿದ್ದಾರೆ. ಹಾಡುಗಳು ಕೂಡ ತುಂಬಾ ಚೆನ್ನಾಗಿ ಮೂಡಿಬಂದಿವೆ.

ಸಂಕಲನ ಕಾರ್ಯದಲ್ಲಿ ನಿಶಿತ್ ಪೂಜಾರಿ ತಮ್ಮ ಕೈಚಳಕ ತೋರಿಸಿದ್ದಾರೆ. ಬಂಡೆ ಚಂದ್ರು ರವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿ ಬಂದಿವೆ. ‘ಕಡಲೂರ ಕಣ್ಮಣಿ’ ಚಿತ್ರವನ್ನು ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr ಸುನೀಲ್ ಕುಂಬಾರ್ ರವರು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಪ್ರಸಾದ್ ಹುಣಸೂರ ತಿಳಿಸಿದ್ದಾರೆ.

ಇದನ್ನೂ ಓದಿ : ವಿಶ್ವ ವಿಜೇತರ ಮಹಾ ರೋಡ್ ಶೋ – ವಾಂಖೆಡೆಗೆ ಹರಿದು ಬಂದ ಜನಸಾಗರ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here